<p><strong>ಬೆಂಗಳೂರು</strong>: ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು, ಶಂಕಿತನ ಪತ್ತೆಗಾಗಿ ಮಂಗಳೂರು ಹಾಗೂ ಶಿವಮೊಗ್ಗದಲ್ಲಿ ಕೆಲವರನ್ನು ವಿಚಾರಣೆ ನಡೆಸಿರುವುದಾಗಿ ಗೊತ್ತಾಗಿದೆ.</p>.<p>‘ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟಕ್ಕೂ ಕೆಫೆ ಸ್ಫೋಟಕ್ಕೂ ಸಾಮ್ಯತೆ ಇದೆ’ ಎಂಬುದಾಗಿ ಹಲವು ತನಿಖಾ ತಂಡಗಳು ಅಭಿಪ್ರಾಯಪಟ್ಟಿವೆ. ಇದೇ ಕಾರಣಕ್ಕೆ ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆ ಎನ್ಐಎ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.</p>.<p>2022ರ ನ.19ರಂದು ಮಂಗಳೂರಿನ ನಾಗುರಿಯಲ್ಲಿ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಶಂಕಿತ ಶಾರೀಕ್ ತೀವ್ರ ಗಾಯಗೊಂಡಿದ್ದ. ಈತ ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾನೆ. ಜೈಲಿಗೆ ಭೇಟಿ ನೀಡಿದ್ದ ಎನ್ಐಎ ಅಧಿಕಾರಿಗಳು, ಶಾರೀಕ್ನನ್ನೂ ವಿಚಾರಣೆ ನಡೆಸಿರುವುದಾಗಿ ಮೂಲಗಳು ಹೇಳಿವೆ.</p>.<p>‘ಶಂಕಿತ ಶಾರೀಕ್, ಶಿವಮೊಗ್ಗದಲ್ಲಿ ಬಾಂಬ್ ಸ್ಫೋಟದ ಬಗ್ಗೆ ತರಬೇತಿ ಪಡೆದುಕೊಂಡಿದ್ದ. ಜೊತೆಗೆ, ಸ್ಫೋಟದ ಪರೀಕ್ಷೆಯನ್ನೂ ನಡೆಸಿದ್ದ. ಈತನ ಜೊತೆ ಹಲವರನ್ನು ತರಬೇತಿ ಪಡೆದಿರುವ ಮಾಹಿತಿ ಇದೆ. ಅವರು ಯಾರು ಎಂಬುದನ್ನು ಪತ್ತೆ ಮಾಡಲು ಎನ್ಐಎ ಪ್ರಯತ್ನಿಸುತ್ತಿದೆ’ ಎಂದು ಮೂಲಗಳು ತಿಳಿಸಿವೆ.</p>.<p><strong>ಕೆಫೆಗೆ ಎನ್ಐಎ ಐಜಿಪಿ ಭೇಟಿ:</strong> ದಿ ರಾಮೇಶ್ವರಂ ಕೆಫೆಗೆ ಎನ್ಐಎ ಐಜಿಪಿ ಸಂತೋಷ್ ರಸ್ತೋಗಿ ಹಾಗೂ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿದರು. ಸ್ಥಳೀಯ ಪೊಲೀಸರ ಜೊತೆ ಚರ್ಚಿಸಿ, ಸ್ಫೋಟದ ಬಗ್ಗೆ ಮಾಹಿತಿ ಪಡೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು, ಶಂಕಿತನ ಪತ್ತೆಗಾಗಿ ಮಂಗಳೂರು ಹಾಗೂ ಶಿವಮೊಗ್ಗದಲ್ಲಿ ಕೆಲವರನ್ನು ವಿಚಾರಣೆ ನಡೆಸಿರುವುದಾಗಿ ಗೊತ್ತಾಗಿದೆ.</p>.<p>‘ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟಕ್ಕೂ ಕೆಫೆ ಸ್ಫೋಟಕ್ಕೂ ಸಾಮ್ಯತೆ ಇದೆ’ ಎಂಬುದಾಗಿ ಹಲವು ತನಿಖಾ ತಂಡಗಳು ಅಭಿಪ್ರಾಯಪಟ್ಟಿವೆ. ಇದೇ ಕಾರಣಕ್ಕೆ ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆ ಎನ್ಐಎ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.</p>.<p>2022ರ ನ.19ರಂದು ಮಂಗಳೂರಿನ ನಾಗುರಿಯಲ್ಲಿ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಶಂಕಿತ ಶಾರೀಕ್ ತೀವ್ರ ಗಾಯಗೊಂಡಿದ್ದ. ಈತ ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾನೆ. ಜೈಲಿಗೆ ಭೇಟಿ ನೀಡಿದ್ದ ಎನ್ಐಎ ಅಧಿಕಾರಿಗಳು, ಶಾರೀಕ್ನನ್ನೂ ವಿಚಾರಣೆ ನಡೆಸಿರುವುದಾಗಿ ಮೂಲಗಳು ಹೇಳಿವೆ.</p>.<p>‘ಶಂಕಿತ ಶಾರೀಕ್, ಶಿವಮೊಗ್ಗದಲ್ಲಿ ಬಾಂಬ್ ಸ್ಫೋಟದ ಬಗ್ಗೆ ತರಬೇತಿ ಪಡೆದುಕೊಂಡಿದ್ದ. ಜೊತೆಗೆ, ಸ್ಫೋಟದ ಪರೀಕ್ಷೆಯನ್ನೂ ನಡೆಸಿದ್ದ. ಈತನ ಜೊತೆ ಹಲವರನ್ನು ತರಬೇತಿ ಪಡೆದಿರುವ ಮಾಹಿತಿ ಇದೆ. ಅವರು ಯಾರು ಎಂಬುದನ್ನು ಪತ್ತೆ ಮಾಡಲು ಎನ್ಐಎ ಪ್ರಯತ್ನಿಸುತ್ತಿದೆ’ ಎಂದು ಮೂಲಗಳು ತಿಳಿಸಿವೆ.</p>.<p><strong>ಕೆಫೆಗೆ ಎನ್ಐಎ ಐಜಿಪಿ ಭೇಟಿ:</strong> ದಿ ರಾಮೇಶ್ವರಂ ಕೆಫೆಗೆ ಎನ್ಐಎ ಐಜಿಪಿ ಸಂತೋಷ್ ರಸ್ತೋಗಿ ಹಾಗೂ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿದರು. ಸ್ಥಳೀಯ ಪೊಲೀಸರ ಜೊತೆ ಚರ್ಚಿಸಿ, ಸ್ಫೋಟದ ಬಗ್ಗೆ ಮಾಹಿತಿ ಪಡೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>