ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಶನಿವಾರ ಬೆಂಗಳೂರು ನಗರ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಾಕ್ಷ್ಯಗಳ ಪಟ್ಟಿ ಸಲ್ಲಿಸಿದರು.
ಇದಕ್ಕೆ ಪ್ರತಿಯಾಗಿ ಆರೋಪಿಗಳ ಪರ ವಕೀಲರು ತನಿಖೆಯ ಭಾಗವೆನಿಸಿರುವ ಎಲೆಕ್ಟ್ರಾನಿಕ್ ಸಾಕ್ಷ್ಯಗಳ ಪಟ್ಟಿಯ ಪ್ರತಿ ನೀಡುವಂತೆ ಮನವಿ ಸಲ್ಲಿಸಿದರು. ಈ ಮನವಿಗೆ ಏನಾದರೂ ಆಕ್ಷೇಪಣೆ ಇದ್ದರೆ ಸಲ್ಲಿಸಿ ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 6ಕ್ಕೆ ಮುಂದೂಡಿದೆ.
ಪ್ರಕರಣದ ವಿಚಾರಣೆಯನ್ನು ಬೆಂಗಳೂರು ನಗರ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಇದೇ ಜುಲೈ 4 ರಿಂದ 8ರವರೆಗೆ ನಿತ್ಯವೂ ನಡೆಸಲಿದೆ.ಗೌರಿ ಅವರನ್ನು 2017ರ ಸೆಪ್ಟೆಂಬರ್ 5ರಂದು ರಾಜರಾಜೇಶ್ವರಿ ನಗರದಲ್ಲಿನ ಅವರ ಮನೆಯ ಹೊರಗೆ ಆಗುಂತಕರು ಗುಂಡಿಟ್ಟು ಹತ್ಯೆ ಮಾಡಿದ್ದರು.