<p><strong>ಬೆಂಗಳೂರು</strong>: ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಒಂದು ಕೋಟಿ ಸಸಿ ನೆಡಲು ಪೊಲೀಸರು ವಿಶೇಷ ಅಭಿಯಾನ ಹಮ್ಮಿಕೊಂಡಿದ್ದು, ಬುಧವಾರದಿಂದ ಹಂತ ಹಂತವಾಗಿ ಸಸಿ ನೆಡುವ ಕೆಲಸ ಆರಂಭವಾಗಲಿದೆ.</p>.<p>ವಿಶ್ವ ಪರಿಸರ ದಿನದ ಅಂಗವಾಗಿ ಗೋ ಗ್ರೀನ್ ರೆವೆಲ್ಯೂಷನ್ ಸಂಘಟನೆ ಸಹಯೋಗದಲ್ಲಿ ಪೊಲೀಸರು ಈ ಅಭಿಯಾನ ರೂಪಿಸಿದ್ದಾರೆ. ಪೊಲೀಸ್ ಠಾಣೆಗಳು, ಪೊಲೀಸ್ ವಸತಿ ಗೃಹಗಳ ಆವರಣ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸಸಿ ನೆಡುವ ಗುರಿ ಇಟ್ಟುಕೊಂಡಿದ್ದಾರೆ.</p>.<p>ಆಡುಗೋಡಿಯಲ್ಲಿರುವ ಸಿಎಆರ್ (ನಗರ ಸಶಸ್ತ್ರ ಮೀಸಲು ಪಡೆ) ದಕ್ಷಿಣ ವಿಭಾಗದ ಮೈದಾನದಲ್ಲಿ ಬುಧವಾರ (ಜೂನ್ 5) ನಡೆಯಲಿರುವ ಕಾರ್ಯಕ್ರಮದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಪರಿಸರ ತಜ್ಞ ಎ.ಎನ್. ಯಲ್ಲಪ್ಪರೆಡ್ಡಿ ಹಾಗೂ ಕಮಿಷನರ್ ಬಿ. ದಯಾನಂದ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.</p>.<p>‘ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ. ಉದ್ಯಾನ ನಗರಿ ಬೆಂಗಳೂರಿನಲ್ಲಿ ಮತ್ತಷ್ಟು ಸಸಿಗಳನ್ನು ನೆಡುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಒಂದು ಕೋಟಿ ಸಸಿ ನೆಡುವ ಗುರಿ ಹೊಂದಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಒಂದು ಕೋಟಿ ಸಸಿ ನೆಡಲು ಪೊಲೀಸರು ವಿಶೇಷ ಅಭಿಯಾನ ಹಮ್ಮಿಕೊಂಡಿದ್ದು, ಬುಧವಾರದಿಂದ ಹಂತ ಹಂತವಾಗಿ ಸಸಿ ನೆಡುವ ಕೆಲಸ ಆರಂಭವಾಗಲಿದೆ.</p>.<p>ವಿಶ್ವ ಪರಿಸರ ದಿನದ ಅಂಗವಾಗಿ ಗೋ ಗ್ರೀನ್ ರೆವೆಲ್ಯೂಷನ್ ಸಂಘಟನೆ ಸಹಯೋಗದಲ್ಲಿ ಪೊಲೀಸರು ಈ ಅಭಿಯಾನ ರೂಪಿಸಿದ್ದಾರೆ. ಪೊಲೀಸ್ ಠಾಣೆಗಳು, ಪೊಲೀಸ್ ವಸತಿ ಗೃಹಗಳ ಆವರಣ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸಸಿ ನೆಡುವ ಗುರಿ ಇಟ್ಟುಕೊಂಡಿದ್ದಾರೆ.</p>.<p>ಆಡುಗೋಡಿಯಲ್ಲಿರುವ ಸಿಎಆರ್ (ನಗರ ಸಶಸ್ತ್ರ ಮೀಸಲು ಪಡೆ) ದಕ್ಷಿಣ ವಿಭಾಗದ ಮೈದಾನದಲ್ಲಿ ಬುಧವಾರ (ಜೂನ್ 5) ನಡೆಯಲಿರುವ ಕಾರ್ಯಕ್ರಮದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಪರಿಸರ ತಜ್ಞ ಎ.ಎನ್. ಯಲ್ಲಪ್ಪರೆಡ್ಡಿ ಹಾಗೂ ಕಮಿಷನರ್ ಬಿ. ದಯಾನಂದ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.</p>.<p>‘ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ. ಉದ್ಯಾನ ನಗರಿ ಬೆಂಗಳೂರಿನಲ್ಲಿ ಮತ್ತಷ್ಟು ಸಸಿಗಳನ್ನು ನೆಡುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಒಂದು ಕೋಟಿ ಸಸಿ ನೆಡುವ ಗುರಿ ಹೊಂದಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>