ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ರಾಜ್ಯ ಘಟಕದ ಅಧ್ಯಕ್ಷ ಸಿ. ನವೀನ್ ರೆಡ್ಡಿ, ‘ಕೇಂದ್ರ ಸರ್ಕಾರ ಕಾನೂನು ತಜ್ಞರು, ಸಾರಿಗೆ ವಲಯದ ಪ್ರತಿನಿಧಿಗಳೊಂದಿಗೆ ಯಾವುದೇ ರೀತಿಯ ಸಮಾಲೋಚನೆ ನಡೆಸದೇ ಈ ಕಾನೂನು ಜಾರಿಗೊಳಿಸಲು ತಯಾರಿ ನಡೆಸಿದೆ. ಹೊರ ರಾಜ್ಯಗಳಲ್ಲಿ ಅಪಘಾತ ಸಂಭವಿಸಿದಾಗ ಚಾಲಕರ ಡ್ರೈವಿಂಗ್ ಲೈಸೆನ್ಸ್ ಅನ್ನು ವಶಪಡಿಸಿಕೊಳ್ಳಲಾಗುತ್ತದೆ. ಲಾರಿ ಚಾಲಕರಿಗೆ ಜಾಮೀನು ನೀಡಲು ಸ್ಥಳೀಯ ಭದ್ರತೆ ಕೇಳುವ ಅಂಶವನ್ನು ಈ ಕಾನೂನಿನಿಂದ ಕೈಬಿಡಬೇಕು’ ಎಂದರು.