<p><strong>ಪೀಣ್ಯ ದಾಸರಹಳ್ಳಿ:</strong> ನಾಗಸಂದ್ರ ಮೆಟ್ರೊ ಸ್ಟೇಷನ್ ಪ್ರವೇಶ ದ್ವಾರದ ಬಳಿ ಕುಸಿದಿದ್ದ ರಸ್ತೆಯನ್ನು ಜಲಮಂಡಳಿ ಅಧಿಕಾರಿಗಳು ಗುರುವಾರ ಸರಿಪಡಿಸಿದ್ದಾರೆ.</p><p>ಮೆಟ್ರೊ ಸ್ಟೇಷನ್ ಪ್ರವೇಶ ದ್ವಾರದ ಬಳಿ ಮಂಜುನಾಥ ನಗರದ ಕಡೆ ಹೋಗುವ ರಸ್ತೆಯಲ್ಲಿ 5 ದಿನಗಳ ಹಿಂದೆ ಭಾರಿ ವಾಹನವೊಂದು ಚಲಿಸಿದ್ದರಿಂದ ರಸ್ತೆ ಕುಸಿದಿತ್ತು. ನೀರಿನ ಸಂಪರ್ಕಕ್ಕಾಗಿ ಪೈಪ್ ಅಳವಡಿಸಲು ಜಲಮಂಡಳಿ ಗುಂಡಿ ತೆಗೆದಿತ್ತು. ಕಾಮಗಾರಿ ಮುಗಿದ ಮೇಲೆ ಸಮರ್ಪಕವಾಗಿ ಮುಚ್ಚದೇ ಇರುವುದು ರಸ್ತೆ ಕುಸಿಯಲು ಕಾರಣವಾಗಿತ್ತು. ಮೆಟ್ರೊ ರೈಲು ನಿಲ್ದಾಣಕ್ಕೆ ಬಂದು ಹೋಗುವವರಿಗೆ ಇದರಿಂದ ತೊಂದರೆಯಾಗುತ್ತಿತ್ತು.</p><p>ಈ ಸಮಸ್ಯೆಯ ಬಗ್ಗೆ ಬುಧವಾರ ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು. ಎಚ್ಚೆತ್ತ ಜಲ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸಿ, ಕುಸಿದಿದ್ದ ಗುಂಡಿಯನ್ನು ಮುಚ್ಚಿಸಿ ಅದರ ಮೇಲೆ ಜಲ್ಲಿಕಲ್ಲು ಹಾಕಿಸಿದ್ದಾರೆ.</p><p>‘ನೀರಿನ ಪೈಪ್ ನೇರ ಸಂಪರ್ಕ ಕಲ್ಪಿಸಿ ಗುಂಡಿಯನ್ನು ಮುಚ್ಚಿದ್ದೇವೆ. ಒಂದೆರಡು ದಿನಗಳ ನಂತರ ಕಾಂಕ್ರೀಟ್ ಹಾಕಲಾಗುತ್ತದೆ’ ಎಂದು ಜಲಮಂಡಳಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಾಗರಾಜು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.ಬೆಂಗಳೂರು: ನಾಗಸಂದ್ರ ಮೆಟ್ರೊ ಸ್ಟೇಷನ್ ಬಳಿ ಕುಸಿದ ರಸ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ನಾಗಸಂದ್ರ ಮೆಟ್ರೊ ಸ್ಟೇಷನ್ ಪ್ರವೇಶ ದ್ವಾರದ ಬಳಿ ಕುಸಿದಿದ್ದ ರಸ್ತೆಯನ್ನು ಜಲಮಂಡಳಿ ಅಧಿಕಾರಿಗಳು ಗುರುವಾರ ಸರಿಪಡಿಸಿದ್ದಾರೆ.</p><p>ಮೆಟ್ರೊ ಸ್ಟೇಷನ್ ಪ್ರವೇಶ ದ್ವಾರದ ಬಳಿ ಮಂಜುನಾಥ ನಗರದ ಕಡೆ ಹೋಗುವ ರಸ್ತೆಯಲ್ಲಿ 5 ದಿನಗಳ ಹಿಂದೆ ಭಾರಿ ವಾಹನವೊಂದು ಚಲಿಸಿದ್ದರಿಂದ ರಸ್ತೆ ಕುಸಿದಿತ್ತು. ನೀರಿನ ಸಂಪರ್ಕಕ್ಕಾಗಿ ಪೈಪ್ ಅಳವಡಿಸಲು ಜಲಮಂಡಳಿ ಗುಂಡಿ ತೆಗೆದಿತ್ತು. ಕಾಮಗಾರಿ ಮುಗಿದ ಮೇಲೆ ಸಮರ್ಪಕವಾಗಿ ಮುಚ್ಚದೇ ಇರುವುದು ರಸ್ತೆ ಕುಸಿಯಲು ಕಾರಣವಾಗಿತ್ತು. ಮೆಟ್ರೊ ರೈಲು ನಿಲ್ದಾಣಕ್ಕೆ ಬಂದು ಹೋಗುವವರಿಗೆ ಇದರಿಂದ ತೊಂದರೆಯಾಗುತ್ತಿತ್ತು.</p><p>ಈ ಸಮಸ್ಯೆಯ ಬಗ್ಗೆ ಬುಧವಾರ ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು. ಎಚ್ಚೆತ್ತ ಜಲ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲಿಸಿ, ಕುಸಿದಿದ್ದ ಗುಂಡಿಯನ್ನು ಮುಚ್ಚಿಸಿ ಅದರ ಮೇಲೆ ಜಲ್ಲಿಕಲ್ಲು ಹಾಕಿಸಿದ್ದಾರೆ.</p><p>‘ನೀರಿನ ಪೈಪ್ ನೇರ ಸಂಪರ್ಕ ಕಲ್ಪಿಸಿ ಗುಂಡಿಯನ್ನು ಮುಚ್ಚಿದ್ದೇವೆ. ಒಂದೆರಡು ದಿನಗಳ ನಂತರ ಕಾಂಕ್ರೀಟ್ ಹಾಕಲಾಗುತ್ತದೆ’ ಎಂದು ಜಲಮಂಡಳಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಾಗರಾಜು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.ಬೆಂಗಳೂರು: ನಾಗಸಂದ್ರ ಮೆಟ್ರೊ ಸ್ಟೇಷನ್ ಬಳಿ ಕುಸಿದ ರಸ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>