<p><strong>ಕೆಂಗೇರಿ</strong>: ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಕೆಂಗೇರಿ ಉಪ ನಗರದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು. </p>.<p>ಪೂರ್ವಾರಾಧನೆ, ಮಧ್ಯಾರಾಧನೆ, ಉತ್ತರ ಆರಾಧನೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಗುರು ರಾಘವೇಂದ್ರ ಸ್ವಾಮಿ ಮಠದ ಅಧ್ಯಕ್ಷ ಎಚ್.ಎಸ್. ಸುಧೀಂದ್ರ ಕುಮಾರ್ ನೇತೃತ್ವ ವಹಿಸಿದ್ದರು.</p>.<p>ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿದುಷಿ ಅರ್ಚನಾ ಕುಲಕರ್ಣಿ, ವಿನಯ ಕಾರ್ತಿಕ ರಾವ್, ರಾಜಶ್ರೀ ಶ್ರೀಕಾಂತ್ ಅವರಿಂದ ಕಾರ್ಯಕ್ರಮಗಳು ನಡೆಯಿತು.</p>.<p>ಶಾಸಕ ಎಸ್.ಟಿ. ಸೋಮಶೇಖರ್, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ, ಇನ್ನಿತರ ಗಣ್ಯರು ಭೇಟಿ ನೀಡಿ, ರಾಯರ ದರ್ಶನ ಪಡೆದರು. ಉತ್ತರ ಆರಾಧನೆ ದಿನ ಕೆಂಗೇರಿ ಉಪ ನಗರದ ರಾಜಬೀದಿಗಳಲ್ಲಿ ರಥೋತ್ಸವ ನೆರವೇರಿತು.</p>.<p>ಮಠದ ಪದಾಧಿಕಾರಿಗಳಾದ ಶ್ರೀನಿವಾಸರಾವ್, ಜಿ.ಎಸ್. ಭಾರದ್ವಾಜ್, ಜಯಸಿಂಹ, ಜಿ.ಕೆ. ಭಾರದ್ವಾಜ್, ವಿಜಯೇಂದ್ರ, ಗುರುರಾಜ ಮುಜುಂದಾರ್, ಪ್ರಶಾಂತ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ</strong>: ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ಕೆಂಗೇರಿ ಉಪ ನಗರದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು. </p>.<p>ಪೂರ್ವಾರಾಧನೆ, ಮಧ್ಯಾರಾಧನೆ, ಉತ್ತರ ಆರಾಧನೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಗುರು ರಾಘವೇಂದ್ರ ಸ್ವಾಮಿ ಮಠದ ಅಧ್ಯಕ್ಷ ಎಚ್.ಎಸ್. ಸುಧೀಂದ್ರ ಕುಮಾರ್ ನೇತೃತ್ವ ವಹಿಸಿದ್ದರು.</p>.<p>ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿದುಷಿ ಅರ್ಚನಾ ಕುಲಕರ್ಣಿ, ವಿನಯ ಕಾರ್ತಿಕ ರಾವ್, ರಾಜಶ್ರೀ ಶ್ರೀಕಾಂತ್ ಅವರಿಂದ ಕಾರ್ಯಕ್ರಮಗಳು ನಡೆಯಿತು.</p>.<p>ಶಾಸಕ ಎಸ್.ಟಿ. ಸೋಮಶೇಖರ್, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ, ಇನ್ನಿತರ ಗಣ್ಯರು ಭೇಟಿ ನೀಡಿ, ರಾಯರ ದರ್ಶನ ಪಡೆದರು. ಉತ್ತರ ಆರಾಧನೆ ದಿನ ಕೆಂಗೇರಿ ಉಪ ನಗರದ ರಾಜಬೀದಿಗಳಲ್ಲಿ ರಥೋತ್ಸವ ನೆರವೇರಿತು.</p>.<p>ಮಠದ ಪದಾಧಿಕಾರಿಗಳಾದ ಶ್ರೀನಿವಾಸರಾವ್, ಜಿ.ಎಸ್. ಭಾರದ್ವಾಜ್, ಜಯಸಿಂಹ, ಜಿ.ಕೆ. ಭಾರದ್ವಾಜ್, ವಿಜಯೇಂದ್ರ, ಗುರುರಾಜ ಮುಜುಂದಾರ್, ಪ್ರಶಾಂತ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>