ಕೃಷ್ಣಪ್ಪ ಜೂನ್ 24ರಂದು ರಾತ್ರಿ ಮನೆಗೆ ಬೀಗ ಹಾಕಿಕೊಂಡುಕುಟುಂಬ ಸಮೇತ ಹೊರಗಡೆ ಹೋಗಿದ್ದರು. ಅದೇ ಸಂದರ್ಭದಲ್ಲಿ ಸ್ನೇಹಿತರ ಜೊತೆ ಸೇರಿ ಮನೆಗೆ ಹೋಗಿದ್ದ ಆರೋಪಿ, ನಕಲಿ ಕೀ ಬಳಸಿ ಬಾಗಿಲು ತೆರೆದಿದ್ದರು. ಬೀರುವಿನಲ್ಲಿಟ್ಟಿದ್ದ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು. ಜೂನ್ 25ರಂದು ಮಾಲೀಕರು ಮನೆಗೆ ವಾಪಸ್ ಬಂದಾಗಲೇ ಕೃತ್ಯ ಗಮನಕ್ಕೆ ಬಂದಿತ್ತು ಎಂದು ಪೊಲೀಸರು ಹೇಳಿದರು.