<p><strong>ಬೆಂಗಳೂರು</strong>: ರಸ್ತೆಯಲ್ಲಿ ಕಸಗುಡಿಸುವ ಹಾಗೂ ಕಾಲುವೆ ಸ್ವಚ್ಛಗೊಳಿಸುವ ಸೋಗಿನಲ್ಲಿ ಆಭರಣ ಮಳಿಗೆ ಮತ್ತು ಮನೆಗಳಲ್ಲಿ ಕಳವು ಮಾಡುತ್ತಿದ್ದ ಆರೋಪದಡಿ ಮೂವರನ್ನು ಸುಬ್ರಹ್ಮಣ್ಯನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ನಾಗರಾಜು, ಸಂತೊಷ್ ಹಾಗೂ ದಿಲೀಪ್ ಬಂಧಿತರು. ಸುಬ್ರಹ್ಮಣ್ಯನಗರ, ಹಲಸೂರು ಗೇಟ್, ಸಿಟಿ ಮಾರ್ಕೆಟ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಕೃತ್ಯ ಎಸಗಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ನಸುಕಿನಲ್ಲಿ ಮನೆಗಳಲ್ಲಿ ಗುರುತಿಸುತ್ತಿದ್ದ ಆರೋಪಿಗಳು, ರಾತ್ರಿ ವೇಳೆ ಕಳವು ಮಾಡುತ್ತಿದ್ದರು. ಇತ್ತೀಚೆಗೆ ಪ್ರಕಾಶ್ ಎಂಬುವರ ದ್ವಿಚಕ್ರ ವಾಹನ ಕದ್ದು ಪರಾರಿಯಾಗಿದ್ದರು. ಆ ಬಗ್ಗೆ ದಾಖಲಾಗಿದ್ದ ದೂರಿನ ತನಿಖೆ ಕೈಗೊಂಡಾಗ ಆರೋಪಿಗಳು ಸಿಕ್ಕಿಬಿದ್ದರು’ ಎಂದೂ ತಿಳಿಸಿದರು.</p>.<p class="Subhead">ಮಣ್ಣಿನ ಮೂಟೆ ಕದ್ದಿದ್ದರು; ‘ಸಿಟಿ ಮಾರ್ಕೆಟ್ ಠಾಣೆ ವ್ಯಾಪ್ತಿಯ ಅಕ್ಕಸಾಲಿಗರ ಮಳಿಗೆಯೊಂದಕ್ಕೆ ನುಗ್ಗಿದ್ದ ಆರೋಪಿಗಳು, ಎರಡು ಮೂಟೆ ಮಣ್ಣು ಕದ್ದಿದ್ದರು. ನಂತರ ಮೂಟೆಗಳನ್ನು ವ್ಯಕ್ತಿಯೊಬ್ಬರಿಗೆ ಮಾರಾಟ ಮಾಡಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಆಭರಣ ಕದಿಯಲೆಂದು ಆರೋಪಿಗಳು ಮಳಿಗೆಗೆ ನುಗ್ಗಿದ್ದರು. ಆದರೆ, ಆಭರಣಗಳು ಸಿಕ್ಕಿರಲಿಲ್ಲ. ಮಣ್ಣಿನಲ್ಲಿ ಚಿನ್ನದ ಕಣಗಳು ಇರಬಹುದೆಂದು ತಿಳಿದು ಮೂಟೆಗಳನ್ನು ಕದ್ದಿದ್ದರು’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಸ್ತೆಯಲ್ಲಿ ಕಸಗುಡಿಸುವ ಹಾಗೂ ಕಾಲುವೆ ಸ್ವಚ್ಛಗೊಳಿಸುವ ಸೋಗಿನಲ್ಲಿ ಆಭರಣ ಮಳಿಗೆ ಮತ್ತು ಮನೆಗಳಲ್ಲಿ ಕಳವು ಮಾಡುತ್ತಿದ್ದ ಆರೋಪದಡಿ ಮೂವರನ್ನು ಸುಬ್ರಹ್ಮಣ್ಯನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ನಾಗರಾಜು, ಸಂತೊಷ್ ಹಾಗೂ ದಿಲೀಪ್ ಬಂಧಿತರು. ಸುಬ್ರಹ್ಮಣ್ಯನಗರ, ಹಲಸೂರು ಗೇಟ್, ಸಿಟಿ ಮಾರ್ಕೆಟ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಕೃತ್ಯ ಎಸಗಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ನಸುಕಿನಲ್ಲಿ ಮನೆಗಳಲ್ಲಿ ಗುರುತಿಸುತ್ತಿದ್ದ ಆರೋಪಿಗಳು, ರಾತ್ರಿ ವೇಳೆ ಕಳವು ಮಾಡುತ್ತಿದ್ದರು. ಇತ್ತೀಚೆಗೆ ಪ್ರಕಾಶ್ ಎಂಬುವರ ದ್ವಿಚಕ್ರ ವಾಹನ ಕದ್ದು ಪರಾರಿಯಾಗಿದ್ದರು. ಆ ಬಗ್ಗೆ ದಾಖಲಾಗಿದ್ದ ದೂರಿನ ತನಿಖೆ ಕೈಗೊಂಡಾಗ ಆರೋಪಿಗಳು ಸಿಕ್ಕಿಬಿದ್ದರು’ ಎಂದೂ ತಿಳಿಸಿದರು.</p>.<p class="Subhead">ಮಣ್ಣಿನ ಮೂಟೆ ಕದ್ದಿದ್ದರು; ‘ಸಿಟಿ ಮಾರ್ಕೆಟ್ ಠಾಣೆ ವ್ಯಾಪ್ತಿಯ ಅಕ್ಕಸಾಲಿಗರ ಮಳಿಗೆಯೊಂದಕ್ಕೆ ನುಗ್ಗಿದ್ದ ಆರೋಪಿಗಳು, ಎರಡು ಮೂಟೆ ಮಣ್ಣು ಕದ್ದಿದ್ದರು. ನಂತರ ಮೂಟೆಗಳನ್ನು ವ್ಯಕ್ತಿಯೊಬ್ಬರಿಗೆ ಮಾರಾಟ ಮಾಡಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಆಭರಣ ಕದಿಯಲೆಂದು ಆರೋಪಿಗಳು ಮಳಿಗೆಗೆ ನುಗ್ಗಿದ್ದರು. ಆದರೆ, ಆಭರಣಗಳು ಸಿಕ್ಕಿರಲಿಲ್ಲ. ಮಣ್ಣಿನಲ್ಲಿ ಚಿನ್ನದ ಕಣಗಳು ಇರಬಹುದೆಂದು ತಿಳಿದು ಮೂಟೆಗಳನ್ನು ಕದ್ದಿದ್ದರು’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>