ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಯಾಣ ಮಂಟಪದಲ್ಲಿ ಚಿನ್ನಾಭರಣ ಕಳವು; ಬಂಧನ

Last Updated 24 ಅಕ್ಟೋಬರ್ 2020, 22:12 IST
ಅಕ್ಷರ ಗಾತ್ರ

ಬೆಂಗಳೂರು: ಮದುವೆ ನಡೆಯುತ್ತಿದ್ದ ಕಲ್ಯಾಣ ಮಂಟಪಗಳಿಗೆ ಹೋಗಿ ಚಿನ್ನಾಭರಣ ಕಳವು ಮಾಡುತ್ತಿದ್ದ ಆರೋಪದಡಿ ಕಮಲಮ್ಮ (26) ಎಂಬುವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

‘ನಾಗರಹೊಳೆ ನಿವಾಸಿ ಕಮಲಮ್ಮ, ಸಂಬಂಧಿಕರ ಸೋಗಿನಲ್ಲಿ ಕಲ್ಯಾಣ ಮಂಟಪಕ್ಕೆ ಹೋಗಿ ಕೃತ್ಯ ಎಸಗುತ್ತಿದ್ದರು. ಅವರಿಂದ ₹ 5 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸುಂಕದಕಟ್ಟೆಯ ಎಸ್‌ಪಿಕೆ ಕಲ್ಯಾಣ ಮಂಟಪದಲ್ಲಿ ಮಾರ್ಚ್ 14ರಂದು ಮದುವೆಗೆ ಹೋಗಿದ್ದ ಆರೋಪಿ, ಸೂಟ್‌ಕೇಸ್‌ನಲ್ಲಿದ್ದ ಚಿನ್ನಾಭರಣ ಕದ್ದುಕೊಂಡು ಪರಾರಿಯಾಗಿದ್ದರು. ಆ ಬಗ್ಗೆ ಪ್ರಕರಣ ದಾಖಲಾಗಿತ್ತು.’

‘ಬಂಧಿತ ಆರೋಪಿ, ಮಾದನಾಯಕನಹಳ್ಳಿ ಹಾಗೂ ಪೀಣ್ಯ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ಎಸಗಿರುವ ಮಾಹಿತಿ ಸಿಕ್ಕಿದೆ’ ಎಂದೂ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT