‘ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ ಆರೋಪಿಗಳು, ಆಗಾಗ ವಿಮಾನದಲ್ಲಿ ಬೆಂಗಳೂರಿಗೆ ಬರುತ್ತಿದ್ದರು. ಅಂಗಳದಲ್ಲಿ ಕಸ ಹಾಗೂ ದಿನಪತ್ರಿಕೆಗಳು ಬಿದ್ದಿರುತ್ತಿದ್ದ ಮನೆಗಳನ್ನು ಗುರುತಿಸಿ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದರು. ರಾತ್ರಿ ವೇಳೆ ಬಾಗಿಲು ಬೀಗ ಮುರಿದು ಮನೆಯೊಳಗೆ ನುಗ್ಗಿ ಚಿನ್ನಾಭರಣ ಕದ್ದುಕೊಂಡು ಪರಾರಿಯಾಗುತ್ತಿದ್ದರು’ ಎಂದೂ ತಿಳಿಸಿದರು.