<p><strong>ಬೆಂಗಳೂರು:</strong> ದುಶ್ಚಟಗಳಿಗೆ ಹಣ ಹೊಂದಿಸಲು ಸುಲಿಗೆ ಹಾಗೂ ಕಳ್ಳತನ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.</p>.<p>‘ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮನೋಜ್ಕುಮಾರ್ (20) ಹಾಗೂ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಸೂರ್ಯ ಭಾಸ್ಕರ್ (45) ಬಂಧಿತರು ಅವರಿಂದ ₹ 56 ಲಕ್ಷ ಮೌಲ್ಯದ 1 ಕೆ.ಜಿ. 167 ಗ್ರಾಂ ಚಿನ್ನಾಭರಣ ಹಾಗೂ 300 ಗ್ರಾಂ ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘9ನೇ ತರಗತಿವರೆಗೆ ಓದಿದ್ದ ಮನೋಜ್ಕುಮಾರ್, ತಮಿಳುನಾಡಿನ ಕಂಪನಿಯೊಂದರಲ್ಲಿ ಕಚೇರಿ ಸಹಾಯಕನಾಗಿ ಕೆಲಸಕ್ಕೆ ಸೇರಿದ್ದ. ದುಶ್ಚಟಗಳ ದಾಸನಾಗಿದ್ದ ಆತ, ದುಡಿದ ಹಣವನ್ನೆಲ್ಲ ಅದಕ್ಕೆ ಖರ್ಚು ಮಾಡುತ್ತಿದ್ದ. ಹಣ ಸಾಲದಿದ್ದಾಗ ಸುಲಿಗೆ ಹಾಗೂ ಕಳವು ಮಾಡಲಾರಂಭಿಸಿದ್ದ.’</p>.<p>‘2 ವರ್ಷಗಳ ಹಿಂದೆ ವ್ಯಕ್ತಿಯೊಬ್ಬರನ್ನು ಮನೋಜ್ಕುಮಾರ್ ಸುಲಿಗೆ ಮಾಡಿದ್ದ. ಆ ಪ್ರಕರಣದಲ್ಲಿ ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಜಾಮೀನು ಮೇಲೆ ಜೈಲಿನಿಂದ ಹೊರಬಂದಿದ್ದ ಆತ, ಮನೆಗಳಲ್ಲಿ ಕಳವು ಮಾಡಲಾರಂಭಿಸಿದ್ದ’ ಎಂದೂ ಪೊಲೀಸರು ತಿಳಿಸಿದರು.</p>.<p>‘ಹಗಲಿನಲ್ಲಿ ನಗರದ ಹಲವು ಪ್ರದೇಶಗಳಲ್ಲಿ ಸುತ್ತಾಡುತ್ತಿದ್ದ ಆರೋಪಿ, ಬೀಗ ಹಾಕಿದ್ದ, ರಂಗೋಲಿ ಇಲ್ಲದ ಹಾಗೂ ಹೆಚ್ಚು ಕಸ ಬಿದ್ದಿರುತ್ತಿದ್ದ ಮನೆಗಳನ್ನು ಗುರುತಿಸುತ್ತಿದ್ದ. ರಾತ್ರಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದ.’</p>.<p>‘ಮನೋಜ್ಕುಮಾರ್ ಕೃತ್ಯಕ್ಕೆ ಆರೋಪಿ ಸೂರ್ಯ ಭಾಸ್ಕರ್ ಸಹಕಾರ ನೀಡುತ್ತಿದ್ದ. ಚಿನ್ನದ ಕೆಲಸ ಮಾಡುತ್ತಿದ್ದ ಸೂರ್ಯ, ಮನೋಜ್ ತಂದುಕೊಡುತ್ತಿದ್ದ ಆಭರಣಗಳನ್ನು ಮಾರುತ್ತಿದ್ದ. ಬಂದ ಹಣದಲ್ಲಿ ಕಮಿಷನ್ ಪಡೆದು ಉಳಿದ ಹಣವನ್ನು ನೀಡುತ್ತಿದ್ದ. ಇವರಿಬ್ಬರ ಬಂಧನದಿಂದ ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 5 ಪ್ರಕರಣಗಳು ಬಯಲಾಗಿವೆ. ಮತ್ತಷ್ಟು ಕಡೆ ಆರೋಪಿಗಳು ಕೃತ್ಯ ಎಸಗಿರುವ ಮಾಹಿತಿಯೂ ಇದೆ’ ಎಂದೂ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದುಶ್ಚಟಗಳಿಗೆ ಹಣ ಹೊಂದಿಸಲು ಸುಲಿಗೆ ಹಾಗೂ ಕಳ್ಳತನ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.</p>.<p>‘ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮನೋಜ್ಕುಮಾರ್ (20) ಹಾಗೂ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಸೂರ್ಯ ಭಾಸ್ಕರ್ (45) ಬಂಧಿತರು ಅವರಿಂದ ₹ 56 ಲಕ್ಷ ಮೌಲ್ಯದ 1 ಕೆ.ಜಿ. 167 ಗ್ರಾಂ ಚಿನ್ನಾಭರಣ ಹಾಗೂ 300 ಗ್ರಾಂ ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘9ನೇ ತರಗತಿವರೆಗೆ ಓದಿದ್ದ ಮನೋಜ್ಕುಮಾರ್, ತಮಿಳುನಾಡಿನ ಕಂಪನಿಯೊಂದರಲ್ಲಿ ಕಚೇರಿ ಸಹಾಯಕನಾಗಿ ಕೆಲಸಕ್ಕೆ ಸೇರಿದ್ದ. ದುಶ್ಚಟಗಳ ದಾಸನಾಗಿದ್ದ ಆತ, ದುಡಿದ ಹಣವನ್ನೆಲ್ಲ ಅದಕ್ಕೆ ಖರ್ಚು ಮಾಡುತ್ತಿದ್ದ. ಹಣ ಸಾಲದಿದ್ದಾಗ ಸುಲಿಗೆ ಹಾಗೂ ಕಳವು ಮಾಡಲಾರಂಭಿಸಿದ್ದ.’</p>.<p>‘2 ವರ್ಷಗಳ ಹಿಂದೆ ವ್ಯಕ್ತಿಯೊಬ್ಬರನ್ನು ಮನೋಜ್ಕುಮಾರ್ ಸುಲಿಗೆ ಮಾಡಿದ್ದ. ಆ ಪ್ರಕರಣದಲ್ಲಿ ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಜಾಮೀನು ಮೇಲೆ ಜೈಲಿನಿಂದ ಹೊರಬಂದಿದ್ದ ಆತ, ಮನೆಗಳಲ್ಲಿ ಕಳವು ಮಾಡಲಾರಂಭಿಸಿದ್ದ’ ಎಂದೂ ಪೊಲೀಸರು ತಿಳಿಸಿದರು.</p>.<p>‘ಹಗಲಿನಲ್ಲಿ ನಗರದ ಹಲವು ಪ್ರದೇಶಗಳಲ್ಲಿ ಸುತ್ತಾಡುತ್ತಿದ್ದ ಆರೋಪಿ, ಬೀಗ ಹಾಕಿದ್ದ, ರಂಗೋಲಿ ಇಲ್ಲದ ಹಾಗೂ ಹೆಚ್ಚು ಕಸ ಬಿದ್ದಿರುತ್ತಿದ್ದ ಮನೆಗಳನ್ನು ಗುರುತಿಸುತ್ತಿದ್ದ. ರಾತ್ರಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದ.’</p>.<p>‘ಮನೋಜ್ಕುಮಾರ್ ಕೃತ್ಯಕ್ಕೆ ಆರೋಪಿ ಸೂರ್ಯ ಭಾಸ್ಕರ್ ಸಹಕಾರ ನೀಡುತ್ತಿದ್ದ. ಚಿನ್ನದ ಕೆಲಸ ಮಾಡುತ್ತಿದ್ದ ಸೂರ್ಯ, ಮನೋಜ್ ತಂದುಕೊಡುತ್ತಿದ್ದ ಆಭರಣಗಳನ್ನು ಮಾರುತ್ತಿದ್ದ. ಬಂದ ಹಣದಲ್ಲಿ ಕಮಿಷನ್ ಪಡೆದು ಉಳಿದ ಹಣವನ್ನು ನೀಡುತ್ತಿದ್ದ. ಇವರಿಬ್ಬರ ಬಂಧನದಿಂದ ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 5 ಪ್ರಕರಣಗಳು ಬಯಲಾಗಿವೆ. ಮತ್ತಷ್ಟು ಕಡೆ ಆರೋಪಿಗಳು ಕೃತ್ಯ ಎಸಗಿರುವ ಮಾಹಿತಿಯೂ ಇದೆ’ ಎಂದೂ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>