<p><strong>ಬೆಂಗಳೂರು: </strong>ನಗರದ ವಿವಿಧ ಬ್ಯಾಂಕ್ಗಳ ಬಳಿ ಸುತ್ತಾಡಿ ಗ್ರಾಹಕರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಓಜಿಕುಪ್ಪಂ ಗ್ಯಾಂಗ್ ಸದಸ್ಯರು ಕೊತ್ತನೂರು ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>‘ಬ್ಯಾಂಕ್ ಗ್ರಾಹಕರನ್ನು ಹಿಂಬಾಲಿಸಿ ಹಣ ಕದ್ದುಕೊಂಡು ಪರಾರಿಯಾಗುತ್ತಿದ್ದ ಆರೋಪದಡಿ ಗುರಿಕುಮಾರ್ ಹಾಗೂ ಷಣ್ಮುಗಂ ಎಂಬುವವರನ್ನು ಬಂಧಿಸಲಾಗಿದೆ. ಮತ್ತಷ್ಟು ಮಂದಿ ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಓಜಿಗುಪ್ಪಂ ಗ್ಯಾಂಗ್ ಕಟ್ಟಿಕೊಂಡಿದ್ದ ಆರೋಪಿಗಳು, ಕೋಡ್ ಹಾಗೂ ಸನ್ನೆಗಳ ಮೂಲಕ ಕೃತ್ಯ ಎಸಗುತ್ತಿದ್ದರು. ಕೊತ್ತನೂರು, ಅಮೃತಹಳ್ಳಿ, ಯಲಹಂಕ, ಮಾರತ್ತಹಳ್ಳಿ ಹಾಗೂ ವಿವಿಧ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಕಳ್ಳತನ ಮಾಡಿರುವುದು ಗೊತ್ತಾಗಿದೆ’ ಎಂದೂ ತಿಳಿಸಿವೆ.</p>.<p class="Subhead">ಕಾದು, ಹಿಂಬಾಲಿಸಿ ಕಳ್ಳತನ: ‘ನಿತ್ಯವೂ ಬ್ಯಾಂಕ್ ಬಳಿ ಆರೋಪಿಗಳು ಬರುತ್ತಿದ್ದರು. ಕೆಲವರು ಬ್ಯಾಂಕ್ನೊಳಗೆ ಹೋಗುತ್ತಿದ್ದರು. ಯಾರಾದರೂ ಲಕ್ಷಾಂತರ ರೂಪಾಯಿ ಹಣ ಡ್ರಾ ಮಾಡಿ ಕೊಂಡು ಹೋಗುವುದು ಗೊತ್ತಾದರೆ, ಆ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಿದ್ದರು. ಅಂಥ ಗ್ರಾಹಕರನ್ನು ಹಿಂಬಾಲಿಸಿ, ಗಮನ ಬೇರೆಡೆ ಹಣದ ಬ್ಯಾಗ್ ಕದ್ದುಕೊಂಡು ಪರಾರಿಯಾಗುತ್ತಿದ್ದರು’ ಎಂದು ಪೊಲೀಸ್ ಮೂಲಗಳು<br />ಹೇಳಿವೆ.</p>.<p>‘ಆರೋಪಿಗಳು ಸನ್ನೆ ಮೂಲಕ ಮಾತನಾಡುತ್ತಿದ್ದರು. ತಲೆ ಮೇಲೆ ಕೈ ಇಟ್ಟರೆ ಎಚ್ಚರ ವಹಿಸುವಂತೆ ಹಾಗೂ ಮೂಗಿನ ಮೇಲೆ ಕೈ ಇಟ್ಟರೆ ಕಳ್ಳತನ ಮಾಡುವ ಸನ್ನೆ ಇವರದ್ದಾಗಿತ್ತು. ಇತ್ತೀಚೆಗೆ ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ₹ 4 ಲಕ್ಷ ಕಳ್ಳತನ<br />ವಾಗಿತ್ತು. ಅದರ ತನಿಖೆ ಕೈಗೊಂಡಾಗ ಆರೋಪಿಗಳು ಸಿಕ್ಕಿಬಿದ್ದರು. ಕಳ್ಳತನ ಮಾಡುವುದೇ ಇವರ ವೃತ್ತಿ’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ವಿವಿಧ ಬ್ಯಾಂಕ್ಗಳ ಬಳಿ ಸುತ್ತಾಡಿ ಗ್ರಾಹಕರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಓಜಿಕುಪ್ಪಂ ಗ್ಯಾಂಗ್ ಸದಸ್ಯರು ಕೊತ್ತನೂರು ಪೊಲೀಸರ ಬಲೆಗೆ ಬಿದ್ದಿದ್ದಾರೆ.</p>.<p>‘ಬ್ಯಾಂಕ್ ಗ್ರಾಹಕರನ್ನು ಹಿಂಬಾಲಿಸಿ ಹಣ ಕದ್ದುಕೊಂಡು ಪರಾರಿಯಾಗುತ್ತಿದ್ದ ಆರೋಪದಡಿ ಗುರಿಕುಮಾರ್ ಹಾಗೂ ಷಣ್ಮುಗಂ ಎಂಬುವವರನ್ನು ಬಂಧಿಸಲಾಗಿದೆ. ಮತ್ತಷ್ಟು ಮಂದಿ ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಓಜಿಗುಪ್ಪಂ ಗ್ಯಾಂಗ್ ಕಟ್ಟಿಕೊಂಡಿದ್ದ ಆರೋಪಿಗಳು, ಕೋಡ್ ಹಾಗೂ ಸನ್ನೆಗಳ ಮೂಲಕ ಕೃತ್ಯ ಎಸಗುತ್ತಿದ್ದರು. ಕೊತ್ತನೂರು, ಅಮೃತಹಳ್ಳಿ, ಯಲಹಂಕ, ಮಾರತ್ತಹಳ್ಳಿ ಹಾಗೂ ವಿವಿಧ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಕಳ್ಳತನ ಮಾಡಿರುವುದು ಗೊತ್ತಾಗಿದೆ’ ಎಂದೂ ತಿಳಿಸಿವೆ.</p>.<p class="Subhead">ಕಾದು, ಹಿಂಬಾಲಿಸಿ ಕಳ್ಳತನ: ‘ನಿತ್ಯವೂ ಬ್ಯಾಂಕ್ ಬಳಿ ಆರೋಪಿಗಳು ಬರುತ್ತಿದ್ದರು. ಕೆಲವರು ಬ್ಯಾಂಕ್ನೊಳಗೆ ಹೋಗುತ್ತಿದ್ದರು. ಯಾರಾದರೂ ಲಕ್ಷಾಂತರ ರೂಪಾಯಿ ಹಣ ಡ್ರಾ ಮಾಡಿ ಕೊಂಡು ಹೋಗುವುದು ಗೊತ್ತಾದರೆ, ಆ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಿದ್ದರು. ಅಂಥ ಗ್ರಾಹಕರನ್ನು ಹಿಂಬಾಲಿಸಿ, ಗಮನ ಬೇರೆಡೆ ಹಣದ ಬ್ಯಾಗ್ ಕದ್ದುಕೊಂಡು ಪರಾರಿಯಾಗುತ್ತಿದ್ದರು’ ಎಂದು ಪೊಲೀಸ್ ಮೂಲಗಳು<br />ಹೇಳಿವೆ.</p>.<p>‘ಆರೋಪಿಗಳು ಸನ್ನೆ ಮೂಲಕ ಮಾತನಾಡುತ್ತಿದ್ದರು. ತಲೆ ಮೇಲೆ ಕೈ ಇಟ್ಟರೆ ಎಚ್ಚರ ವಹಿಸುವಂತೆ ಹಾಗೂ ಮೂಗಿನ ಮೇಲೆ ಕೈ ಇಟ್ಟರೆ ಕಳ್ಳತನ ಮಾಡುವ ಸನ್ನೆ ಇವರದ್ದಾಗಿತ್ತು. ಇತ್ತೀಚೆಗೆ ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ₹ 4 ಲಕ್ಷ ಕಳ್ಳತನ<br />ವಾಗಿತ್ತು. ಅದರ ತನಿಖೆ ಕೈಗೊಂಡಾಗ ಆರೋಪಿಗಳು ಸಿಕ್ಕಿಬಿದ್ದರು. ಕಳ್ಳತನ ಮಾಡುವುದೇ ಇವರ ವೃತ್ತಿ’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>