<p>ಬೆಂಗಳೂರು: ನಗರದ ಹಲವೆಡೆ ಮನೆಗಳಲ್ಲಿ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.</p>.<p>ಬೊಮ್ಮನಹಳ್ಳಿ ಮಂಗಮ್ಮನಪಾಳ್ಯದ ಸೈಯ್ಯದ್ ಇಮ್ರಾನ್ (22) ಹಾಗೂ ಸಿದ್ದಾಪುರ ಟ್ಯಾಂಕ್ ಗಾರ್ಡನ್ನ ವಸೀಂ ಅಕ್ರಮ ಅಲಿಯಾಸ್ ಬ್ಲೇಡ್ ವಸೀಂ (24) ಬಂಧಿತರು. ಇಬ್ಬರಿಂದಲೂ ₹ 8 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ.</p>.<p>‘ಬೀಗ ಹಾಕಿರುತ್ತಿದ್ದ, ರಂಗೋಲಿ ಇರದ ಹಾಗೂ ಬಾಗಿಲು ಬಳಿ ಹೆಚ್ಚು ಕಸ ಬಿದ್ದಿರುವ ಮನೆಗಳನ್ನು ಗುರುತಿಸಿ ಆರೋಪಿಗಳು ಕೃತ್ಯ ಎಸಗುತ್ತಿದ್ದರು. ಇಬ್ಬರೂ ಒಟ್ಟಿಗೆ ಮನೆಗಳಿಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕದ್ದುಕೊಂಡು ಪರಾರಿಯಾಗುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಕೆಲ ತಿಂಗಳ ಹಿಂದೆಯೇ ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಜಾಮೀನು ಮೇಲೆ ಜೈಲಿನಿಂದ ಹೊರಬಂದಿದ್ದ ಅವರಿಬ್ಬರು, ಪುನಃ ಕೃತ್ಯ ಎಸಗಲಾರಂಭಿಸಿದ್ದರು’ ಎಂದು ತಿಳಿಸಿದರು.</p>.<p>‘ಕದ್ದ ಚಿನ್ನಾಭರಣವನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳು, ಅದರಿಂದ ಬಂದ ಹಣದಲ್ಲೇ ಪತ್ನಿಯರ ಜೊತೆ ಶಾಪಿಂಗ್ ಮಾಡುತ್ತಿದ್ದರು. ದುಶ್ಚಟಗಳಿಗೂ ಖರ್ಚು ಮಾಡುತ್ತಿದ್ದರು’ ಎಂದರು.</p>.<p>‘ತಮ್ಮ ಮೇಲಿನ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದ ವಕೀಲರಿಗೂ ಅದೇ ಹಣ ಕೊಡುತ್ತಿದ್ದರು.’</p>.<p>‘ಇವರಿಬ್ಬರ ಬಂಧನದಿಂದ ಕೋರಮಂಗಲ, ತಿಲಕ್ನಗರ, ಬೊಮ್ಮನಹಳ್ಳಿ, ವಿವೇಕನಗರ ಹಾಗೂ ಆಡುಗೋಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗರದ ಹಲವೆಡೆ ಮನೆಗಳಲ್ಲಿ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.</p>.<p>ಬೊಮ್ಮನಹಳ್ಳಿ ಮಂಗಮ್ಮನಪಾಳ್ಯದ ಸೈಯ್ಯದ್ ಇಮ್ರಾನ್ (22) ಹಾಗೂ ಸಿದ್ದಾಪುರ ಟ್ಯಾಂಕ್ ಗಾರ್ಡನ್ನ ವಸೀಂ ಅಕ್ರಮ ಅಲಿಯಾಸ್ ಬ್ಲೇಡ್ ವಸೀಂ (24) ಬಂಧಿತರು. ಇಬ್ಬರಿಂದಲೂ ₹ 8 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ.</p>.<p>‘ಬೀಗ ಹಾಕಿರುತ್ತಿದ್ದ, ರಂಗೋಲಿ ಇರದ ಹಾಗೂ ಬಾಗಿಲು ಬಳಿ ಹೆಚ್ಚು ಕಸ ಬಿದ್ದಿರುವ ಮನೆಗಳನ್ನು ಗುರುತಿಸಿ ಆರೋಪಿಗಳು ಕೃತ್ಯ ಎಸಗುತ್ತಿದ್ದರು. ಇಬ್ಬರೂ ಒಟ್ಟಿಗೆ ಮನೆಗಳಿಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕದ್ದುಕೊಂಡು ಪರಾರಿಯಾಗುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಕೆಲ ತಿಂಗಳ ಹಿಂದೆಯೇ ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಜಾಮೀನು ಮೇಲೆ ಜೈಲಿನಿಂದ ಹೊರಬಂದಿದ್ದ ಅವರಿಬ್ಬರು, ಪುನಃ ಕೃತ್ಯ ಎಸಗಲಾರಂಭಿಸಿದ್ದರು’ ಎಂದು ತಿಳಿಸಿದರು.</p>.<p>‘ಕದ್ದ ಚಿನ್ನಾಭರಣವನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳು, ಅದರಿಂದ ಬಂದ ಹಣದಲ್ಲೇ ಪತ್ನಿಯರ ಜೊತೆ ಶಾಪಿಂಗ್ ಮಾಡುತ್ತಿದ್ದರು. ದುಶ್ಚಟಗಳಿಗೂ ಖರ್ಚು ಮಾಡುತ್ತಿದ್ದರು’ ಎಂದರು.</p>.<p>‘ತಮ್ಮ ಮೇಲಿನ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದ ವಕೀಲರಿಗೂ ಅದೇ ಹಣ ಕೊಡುತ್ತಿದ್ದರು.’</p>.<p>‘ಇವರಿಬ್ಬರ ಬಂಧನದಿಂದ ಕೋರಮಂಗಲ, ತಿಲಕ್ನಗರ, ಬೊಮ್ಮನಹಳ್ಳಿ, ವಿವೇಕನಗರ ಹಾಗೂ ಆಡುಗೋಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>