ಬಸವೇಶ್ವರ ನಗರ, ಬ್ಯಾಡರಹಳ್ಳಿ, ವಿಜಯನಗರ, ಕಾಮಾಕ್ಷಿಪಾಳ್ಯ ಮತ್ತು ಮಾಗಡಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ವಿವಿಧ ಕಳವು ಪ್ರಕರಣಗಳಲ್ಲಿ ಭಾಗಿಯಾದ ಇಬ್ಬರನ್ನು ಬಂಧಿಸಿರುವ ಬಸವೇಶ್ವರ ನಗರ ಠಾಣೆಯ ಪೊಲೀಸರು, ಆರೋಪಿಗಳಿಂದ ₹ 15 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಮಹೇಶ್ ಮತ್ತು ದಯಾನಂದ ಬಂಧಿತರು.