ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಖಾನೆ ಮಾಲೀಕರೊಬ್ಬರ ಮನೆಯಲ್ಲಿ ಚಿನ್ನಾಭರಣ ಕಳವು

Last Updated 7 ಏಪ್ರಿಲ್ 2022, 5:00 IST
ಅಕ್ಷರ ಗಾತ್ರ

ಬೆಂಗಳೂರು: ಹೊರಮಾವು ನಿವಾಸಿ ನಿರ್ಮಲ್‌ ಶರ್ಮ ಎಂಬುವರ ಮನೆಯಲ್ಲಿ ₹10 ಲಕ್ಷ ನಗದು ಹಾಗೂ ₹10 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಆಗಿದೆ. ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ನಿರ್ಮಲ್‌ ಅವರು ಬಿದರಹಳ್ಳಿಯಲ್ಲಿ ಕಾರ್ಖಾನೆಯೊಂದನ್ನು ನಡೆಸುತ್ತಾರೆ. ಎಂದಿನಂತೆ ಅವರು ಬೆಳಿಗ್ಗೆ ಕಾರ್ಖಾನೆಗೆ ಹೋಗಿದ್ದರು. ಕುಟುಂಬದ ಸದಸ್ಯರು ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೊರಗೆ ಹೋಗಿದ್ದರು. 3 ಗಂಟೆ ವೇಳೆಗೆ ವಾಪಸ್‌ ಆಗಿದ್ದರು. ಆಗ ಮನೆಗೆ ಬಾಗಿಲು ತೆರೆದಿತ್ತು. ಒಳಗೆ ಹೋಗಿ ನೋಡಿದಾಗ ಚಿನ್ನಾಭರಣ ಹಾಗೂ ನಗದು ಕಳವಾಗಿರುವುದು ಗಮನಕ್ಕೆ ಬಂದಿತ್ತು’ ಎಂದು ಪೊಲೀಸರು ಹೇಳಿದ್ದಾರೆ.

‘ಮನೆ‌ಯ ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದಾನೆ. ಆತನೇ ಕಳವು ಮಾಡಿರುವ ಶಂಕೆ ಇದೆ. ಮನೆಯ ಸುತ್ತಲಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಪರಿಶೀಲಿಸುತ್ತಿದ್ದೇವೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT