<p><strong>ಬೆಂಗಳೂರು</strong>: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದೇವಸ್ಥಾನ ಹಾಗೂ ಈಜುಕೊಳದ ಬಳಿ ಚಿನ್ನಾಭರಣ ಕಳವು ಮಾಡಿದ್ದ ನಾಲ್ವರು ಆರೋಪಿಗಳನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಈಜುಕೊಳದ ವಸ್ತ್ರ ಬದಲಾಯಿಸುವ ಕೊಠಡಿಯ ಲಾಕರ್ನಲ್ಲಿಟ್ಟಿದ್ದ ಚಿನ್ನಾಭರಣ ದೋಚಿದ್ದ ಈಜು ತರಬೇತುದಾರೆ ಹಾಗೂ ಕಳವು ಮಾಲು ಸ್ವೀಕರಿಸಿದ್ದ ಆರೋಪಿಯನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ತಲಘಟ್ಟಪುರ ನಿವಾಸಿ ಮಮತಾ(35) ಮತ್ತು ಕಳವು ಮಾಲು ಸ್ವೀಕರಿಸಿದ ಸ್ವಾಮಿ(45) ಬಂಧಿತರು. </p>.<p>ಆರೋಪಿಗಳಿಂದ ₹ 3 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಕೆಂಬತ್ತಹಳ್ಳಿಯಲ್ಲಿರುವ ಸ್ವಿಮ್ ಸ್ಕ್ವೇರ್ನಲ್ಲಿ ಚಿನ್ನಾಭರಣ ಕಳವು ಮಾಡಿದ್ದರು ಎಂದು ಪೊಲೀಸರು ಹೇಳಿದರು.</p>.<p>ಈಜು ಕಲಿಯಲು ಬಂದಿದ್ದ ಮಹಿಳೆಯೊಬ್ಬರು ವಸ್ತ್ರ ಬದಲಾಯಿಸುವ ಕೊಠಡಿಯಲ್ಲಿದ್ದ ಲಾಕರ್ನಲ್ಲಿ ಚಿನ್ನಾಭರಣ ಇಟ್ಟಿದ್ದರು. ಅದನ್ನು ಗಮನಿಸಿದ್ದ ಮಮತಾ ಚಿನ್ನಾಭರಣ ಕಳವು ಮಾಡಿ, ಪತಿಯ ಸ್ನೇಹಿತ ಸ್ವಾಮಿಗೆ ಕೊಟ್ಟು ಮಾರಾಟಕ್ಕೆ ಸೂಚಿಸಿದ್ದರು ಎಂದು ಪೊಲೀಸರು ಹೇಳಿದರು.</p>.<p>ದೇವಸ್ಥಾನದಲ್ಲಿ ಕಳವು ಇಬ್ಬರ ಬಂಧನ:<br>ಇನ್ನೊಂದು ಪ್ರಕರಣದಲ್ಲಿ ಮಾರುತಿನಗರದ ಕಬ್ಬಾಳಮ್ಮ ದೇವಿಯ ದೇವಸ್ಥಾನದಲ್ಲಿ ಬೆಳ್ಳಿಯ ವಸ್ತುಗಳು ಹಾಗೂ ಇತರೆ ವಸ್ತುಗಳನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.</p>.<p>ಯಾರಬ್ನಗರ ನಿವಾಸಿಗಳಾದ ತೌಸಿಫ್(30) ಮತ್ತು ಜಮೀರ್(28) ಬಂಧಿತರು.</p>.<p>ಆರೋಪಿಗಳಿಂದ ₹3 ಲಕ್ಷ ಮೌಲ್ಯದ ದೇವಸ್ಥಾನದ ಪೂಜಾ ಸಾಮಗ್ರಿಗಳು ಹಾಗೂ ಐದು ಬೈಕ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದೇವಸ್ಥಾನ ಹಾಗೂ ಈಜುಕೊಳದ ಬಳಿ ಚಿನ್ನಾಭರಣ ಕಳವು ಮಾಡಿದ್ದ ನಾಲ್ವರು ಆರೋಪಿಗಳನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಈಜುಕೊಳದ ವಸ್ತ್ರ ಬದಲಾಯಿಸುವ ಕೊಠಡಿಯ ಲಾಕರ್ನಲ್ಲಿಟ್ಟಿದ್ದ ಚಿನ್ನಾಭರಣ ದೋಚಿದ್ದ ಈಜು ತರಬೇತುದಾರೆ ಹಾಗೂ ಕಳವು ಮಾಲು ಸ್ವೀಕರಿಸಿದ್ದ ಆರೋಪಿಯನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ತಲಘಟ್ಟಪುರ ನಿವಾಸಿ ಮಮತಾ(35) ಮತ್ತು ಕಳವು ಮಾಲು ಸ್ವೀಕರಿಸಿದ ಸ್ವಾಮಿ(45) ಬಂಧಿತರು. </p>.<p>ಆರೋಪಿಗಳಿಂದ ₹ 3 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಕೆಂಬತ್ತಹಳ್ಳಿಯಲ್ಲಿರುವ ಸ್ವಿಮ್ ಸ್ಕ್ವೇರ್ನಲ್ಲಿ ಚಿನ್ನಾಭರಣ ಕಳವು ಮಾಡಿದ್ದರು ಎಂದು ಪೊಲೀಸರು ಹೇಳಿದರು.</p>.<p>ಈಜು ಕಲಿಯಲು ಬಂದಿದ್ದ ಮಹಿಳೆಯೊಬ್ಬರು ವಸ್ತ್ರ ಬದಲಾಯಿಸುವ ಕೊಠಡಿಯಲ್ಲಿದ್ದ ಲಾಕರ್ನಲ್ಲಿ ಚಿನ್ನಾಭರಣ ಇಟ್ಟಿದ್ದರು. ಅದನ್ನು ಗಮನಿಸಿದ್ದ ಮಮತಾ ಚಿನ್ನಾಭರಣ ಕಳವು ಮಾಡಿ, ಪತಿಯ ಸ್ನೇಹಿತ ಸ್ವಾಮಿಗೆ ಕೊಟ್ಟು ಮಾರಾಟಕ್ಕೆ ಸೂಚಿಸಿದ್ದರು ಎಂದು ಪೊಲೀಸರು ಹೇಳಿದರು.</p>.<p>ದೇವಸ್ಥಾನದಲ್ಲಿ ಕಳವು ಇಬ್ಬರ ಬಂಧನ:<br>ಇನ್ನೊಂದು ಪ್ರಕರಣದಲ್ಲಿ ಮಾರುತಿನಗರದ ಕಬ್ಬಾಳಮ್ಮ ದೇವಿಯ ದೇವಸ್ಥಾನದಲ್ಲಿ ಬೆಳ್ಳಿಯ ವಸ್ತುಗಳು ಹಾಗೂ ಇತರೆ ವಸ್ತುಗಳನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.</p>.<p>ಯಾರಬ್ನಗರ ನಿವಾಸಿಗಳಾದ ತೌಸಿಫ್(30) ಮತ್ತು ಜಮೀರ್(28) ಬಂಧಿತರು.</p>.<p>ಆರೋಪಿಗಳಿಂದ ₹3 ಲಕ್ಷ ಮೌಲ್ಯದ ದೇವಸ್ಥಾನದ ಪೂಜಾ ಸಾಮಗ್ರಿಗಳು ಹಾಗೂ ಐದು ಬೈಕ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>