‘ಬಳ್ಳಾರಿ ಜಿಲ್ಲೆಯ ಕಂಪ್ಲಿಯ ಸೈಯದ್ ಬೇಗ್ ಹಾಗೂ ದಾದಾ ನೂರುದ್ದೀನ್ ಬೇಗ್ ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ಕಡಬಗೆರೆಯಲ್ಲಿ ವಾಸವಿದ್ದರು. ಕಳ್ಳತನ ಪ್ರಕರಣದಲ್ಲಿ ಇವರಿಬ್ಬರನ್ನು ಬಂಧಿಸಿ, 1.25 ಕೆ.ಜಿ ಚಿನ್ನಾಭರಣ, 2 ಕೆ.ಜಿ ಬೆಳ್ಳಿ ಸಾಮಗ್ರಿ ಹಾಗೂ ₹ 21.5 ಲಕ್ಷ ನಗದು ಜಪ್ತಿ ಮಾಡಲಾಗಿದೆ’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.