<p><strong>ಬೆಂಗಳೂರು:</strong> ಬುಕ್ ಮಾಡಿದ್ದ ಮೊಬೈಲ್ ಸೇರಿ ಬೆಲೆಬಾಳುವ ವಸ್ತುಗಳನ್ನು ಗ್ರಾಹಕರಿಗೆ ತಲುಪಿಸದೇ ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಒಡಿಶಾದ ಬಾಧವ್ ಡೆಹೂರಿ ಹಾಗೂ ಭವಾನಿ ಶಂಕರ್ ಡೆಹೂರಿ ಬಂಧಿತರು.</p>.<p>‘ಬಂಧಿತರಿಂದ 18 ಮೊಬೈಲ್ ಫೋನ್ಗಳು, ಬೆಲೆಬಾಳುವ ವಾಚ್ಗಳು, ಇಯರ್ ಫೋನ್, ಇಯರ್ ಬಡ್ಸ್, ಹಾಗೂ ಎರಡು ಹಾರ್ಡ್ ಡಿಸ್ಕ್ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ ₹10 ಲಕ್ಷವೆಂದು ಅಂದಾಜಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಠಾಣಾ ವ್ಯಾಪ್ತಿಯ ದೊಡ್ಡನೆಕ್ಕುಂದಿಯಲ್ಲಿ ಎನ್ಸಿಪಿಆರ್ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಸ್ಟಾಕಾರ್ಟ್ ಕಂಪನಿಯ ವ್ಯವಸ್ಥಾಪಕರು ನೀಡಿದ ದೂರು ಆಧರಿಸಿ, ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿತ್ತು. ಪೊಲೀಸ್ ತಂಡವು ಒಡಿಶಾಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಇನ್ಸ್ಟಾಕಾರ್ಟ್ನಲ್ಲಿ ಇಬ್ಬರು ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದರು. ಮೊಬೈಲ್ ಹಾಗೂ ಬೆಲೆಬಾಳುವ ವಸ್ತುಗಳನ್ನು ಗ್ರಾಹಕರಿಗೆ ತಲುಪಿಸುವಂತೆ ಕಂಪನಿಯವರು ಸೂಚಿಸಿ ಕಳುಹಿಸುತ್ತಿದ್ದರು. ಆದರೆ, ಆರೋಪಿಗಳು ಗ್ರಾಹಕರಿಗೆ ತಲುಪಿಸದೇ ವಂಚಿಸುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬುಕ್ ಮಾಡಿದ್ದ ಮೊಬೈಲ್ ಸೇರಿ ಬೆಲೆಬಾಳುವ ವಸ್ತುಗಳನ್ನು ಗ್ರಾಹಕರಿಗೆ ತಲುಪಿಸದೇ ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಒಡಿಶಾದ ಬಾಧವ್ ಡೆಹೂರಿ ಹಾಗೂ ಭವಾನಿ ಶಂಕರ್ ಡೆಹೂರಿ ಬಂಧಿತರು.</p>.<p>‘ಬಂಧಿತರಿಂದ 18 ಮೊಬೈಲ್ ಫೋನ್ಗಳು, ಬೆಲೆಬಾಳುವ ವಾಚ್ಗಳು, ಇಯರ್ ಫೋನ್, ಇಯರ್ ಬಡ್ಸ್, ಹಾಗೂ ಎರಡು ಹಾರ್ಡ್ ಡಿಸ್ಕ್ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ ₹10 ಲಕ್ಷವೆಂದು ಅಂದಾಜಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಠಾಣಾ ವ್ಯಾಪ್ತಿಯ ದೊಡ್ಡನೆಕ್ಕುಂದಿಯಲ್ಲಿ ಎನ್ಸಿಪಿಆರ್ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಸ್ಟಾಕಾರ್ಟ್ ಕಂಪನಿಯ ವ್ಯವಸ್ಥಾಪಕರು ನೀಡಿದ ದೂರು ಆಧರಿಸಿ, ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿತ್ತು. ಪೊಲೀಸ್ ತಂಡವು ಒಡಿಶಾಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಇನ್ಸ್ಟಾಕಾರ್ಟ್ನಲ್ಲಿ ಇಬ್ಬರು ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದರು. ಮೊಬೈಲ್ ಹಾಗೂ ಬೆಲೆಬಾಳುವ ವಸ್ತುಗಳನ್ನು ಗ್ರಾಹಕರಿಗೆ ತಲುಪಿಸುವಂತೆ ಕಂಪನಿಯವರು ಸೂಚಿಸಿ ಕಳುಹಿಸುತ್ತಿದ್ದರು. ಆದರೆ, ಆರೋಪಿಗಳು ಗ್ರಾಹಕರಿಗೆ ತಲುಪಿಸದೇ ವಂಚಿಸುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>