‘ಆಭರಣದ ಮಾಲೀಕ ನೀಡಿದ್ದ ದೂರಿನನ್ವಯ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಕೃತ್ಯ ನಡೆದ ಸ್ಥಳದಿಂದ ನೆಲ್ಲೂರುವರೆಗೆ ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದರು. ಈ ವೇಳೆ ಆರೋಪಿಗಳು ಕೆ.ಆರ್.ಪುರ, ಹೊಸಕೋಟೆ, ಕೋಲಾರ ಮಾರ್ಗವಾಗಿ ಆಂಧ್ರಪ್ರದೇಶಕ್ಕೆ ಹೋಗಿರುವುದು ತಿಳಿಯಿತು’ ಎಂದು ಪೊಲೀಸರು ತಿಳಿಸಿದರು.