<p><strong>ಬೆಂಗಳೂರು:</strong> ಹೆಗಡೆನಗರದ ಎರಡನೇ ಅಡ್ಡರಸ್ತೆಯಲ್ಲಿರುವ ನಾಗಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಬಾಗಿಲಿನ ಬೀಗ ಒಡೆದು ಕಳ್ಳರು, ದೇವರ ಹುಂಡಿ ಕಳವು ಮಾಡಿದ್ದಾರೆ.</p>.<p>ಲಾಕ್ಡೌನ್ ಹಿನ್ನೆಲೆಯಲ್ಲಿ ಹೆಗಡೆನಗರದ ಸುತ್ತಮುತ್ತ ಪೊಲೀಸ್ ಭದ್ರತೆ ಇದ್ದರೂ, ಕಳವು ನಡೆದಿರುವುದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ.</p>.<p>ಸಮೀಪದಲ್ಲೇ ದೇವಸ್ಥಾನದ ಅರ್ಚಕರ ಮನೆ ಇದೆ. ಕಳ್ಳರು ಆ ಮನೆಗೆ ಹೊರಗಿನಿಂದ ಲಾಕ್ ಹಾಕಿ ಈ ಕೃತ್ಯ ಎಸಗಿದ್ದಾರೆ. ಬೆಳಿಗ್ಗೆ ಕಳವು ನಡೆದಿರುವುದು ಬಯಲಿಗೆ ಬಂದಿದೆ.</p>.<p>ದೇವಸ್ಥಾನದ ಕುರಿತು ಸಂಪೂರ್ಣ ಮಾಹಿತಿ ಇರುವವರೇ ಕಳವು ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೆಗಡೆನಗರದ ಎರಡನೇ ಅಡ್ಡರಸ್ತೆಯಲ್ಲಿರುವ ನಾಗಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಬಾಗಿಲಿನ ಬೀಗ ಒಡೆದು ಕಳ್ಳರು, ದೇವರ ಹುಂಡಿ ಕಳವು ಮಾಡಿದ್ದಾರೆ.</p>.<p>ಲಾಕ್ಡೌನ್ ಹಿನ್ನೆಲೆಯಲ್ಲಿ ಹೆಗಡೆನಗರದ ಸುತ್ತಮುತ್ತ ಪೊಲೀಸ್ ಭದ್ರತೆ ಇದ್ದರೂ, ಕಳವು ನಡೆದಿರುವುದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ.</p>.<p>ಸಮೀಪದಲ್ಲೇ ದೇವಸ್ಥಾನದ ಅರ್ಚಕರ ಮನೆ ಇದೆ. ಕಳ್ಳರು ಆ ಮನೆಗೆ ಹೊರಗಿನಿಂದ ಲಾಕ್ ಹಾಕಿ ಈ ಕೃತ್ಯ ಎಸಗಿದ್ದಾರೆ. ಬೆಳಿಗ್ಗೆ ಕಳವು ನಡೆದಿರುವುದು ಬಯಲಿಗೆ ಬಂದಿದೆ.</p>.<p>ದೇವಸ್ಥಾನದ ಕುರಿತು ಸಂಪೂರ್ಣ ಮಾಹಿತಿ ಇರುವವರೇ ಕಳವು ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>