<p><strong>ಬೆಂಗಳೂರು</strong>: ಜೆ.ಪಿ.ನಗರದ ಬಿಸಿನೆಸ್ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಲ್ಯಾಪ್ಟಾಪ್ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು <br>ಜೆ.ಪಿ.ನಗರ ಪೊಲೀಸರು ಬಂಧಿಸಿದ್ದಾರೆ.</p>.<p>ಭರತ್, ವಿಶ್ವನಾಥ್, ಯಶ್ವಂತ್, ಸಂದೀಪ್, ನಾಗೇಂದ್ರ, ಪ್ರಸಾದ್ ಅವರನ್ನು ಬಂಧಿಸಿ, ₹ 2.40 ಲಕ್ಷ ಮೌಲ್ಯದ ಐದು ಲ್ಯಾಪ್ಟಾಪ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿ<br>ಕೊಂಡಿದ್ದಾರೆ.</p>.<p>ಆರೋಪಿಗಳು ನವೆಂಬರ್ 13ರಂದು ಕಂಪನಿಯ ಹಿಂದಿನ ಬಾಗಿಲ ಚಿಲಕ ಮುರಿದು ಐದು ಲ್ಯಾಪ್ಟಾಪ್ ಹಾಗೂ ಇತರೆ ವಸ್ತುಗಳನ್ನು ಕಳವು ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕನಕಪುರ ರಸ್ತೆಯ ರಘುವನಹಳ್ಳಿಯ ಮನೆಯಲ್ಲಿ ಆರು ಮಂದಿಯನ್ನು ಬಂಧಿಸಿದರು.</p>.<p>ಬಂಧಿತರಿಂದ ಐದು ಲ್ಯಾಪ್ಟಾಪ್, ಎರಡು ಲ್ಯಾಪ್ಟಾಪ್ ಬ್ಯಾಗ್, ಚಾರ್ಜರ್, ಕಂಪನಿಯ ಕೆಲವು ದಾಖಲಾತಿಗಳು, ಫೆಡರಲ್ ಬ್ಯಾಂಕ್ನ ಖಾತೆಯ ಖಾಲಿ ಚೆಕ್ಗಳು, ಡಿವಿಆರ್ ಮತ್ತು ಇತರೆ ವಸ್ತುಗಳನ್ನು ವಶಪಡಿಸಿ ಕೊಳ್ಳಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ .</p>.<p>ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜೆ.ಪಿ.ನಗರದ ಬಿಸಿನೆಸ್ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಲ್ಯಾಪ್ಟಾಪ್ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು <br>ಜೆ.ಪಿ.ನಗರ ಪೊಲೀಸರು ಬಂಧಿಸಿದ್ದಾರೆ.</p>.<p>ಭರತ್, ವಿಶ್ವನಾಥ್, ಯಶ್ವಂತ್, ಸಂದೀಪ್, ನಾಗೇಂದ್ರ, ಪ್ರಸಾದ್ ಅವರನ್ನು ಬಂಧಿಸಿ, ₹ 2.40 ಲಕ್ಷ ಮೌಲ್ಯದ ಐದು ಲ್ಯಾಪ್ಟಾಪ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿ<br>ಕೊಂಡಿದ್ದಾರೆ.</p>.<p>ಆರೋಪಿಗಳು ನವೆಂಬರ್ 13ರಂದು ಕಂಪನಿಯ ಹಿಂದಿನ ಬಾಗಿಲ ಚಿಲಕ ಮುರಿದು ಐದು ಲ್ಯಾಪ್ಟಾಪ್ ಹಾಗೂ ಇತರೆ ವಸ್ತುಗಳನ್ನು ಕಳವು ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕನಕಪುರ ರಸ್ತೆಯ ರಘುವನಹಳ್ಳಿಯ ಮನೆಯಲ್ಲಿ ಆರು ಮಂದಿಯನ್ನು ಬಂಧಿಸಿದರು.</p>.<p>ಬಂಧಿತರಿಂದ ಐದು ಲ್ಯಾಪ್ಟಾಪ್, ಎರಡು ಲ್ಯಾಪ್ಟಾಪ್ ಬ್ಯಾಗ್, ಚಾರ್ಜರ್, ಕಂಪನಿಯ ಕೆಲವು ದಾಖಲಾತಿಗಳು, ಫೆಡರಲ್ ಬ್ಯಾಂಕ್ನ ಖಾತೆಯ ಖಾಲಿ ಚೆಕ್ಗಳು, ಡಿವಿಆರ್ ಮತ್ತು ಇತರೆ ವಸ್ತುಗಳನ್ನು ವಶಪಡಿಸಿ ಕೊಳ್ಳಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ .</p>.<p>ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>