‘ಕಳವು ಪ್ರಕರಣಗಳಲ್ಲಿ ಈ ಹಿಂದೆ ಈತನನ್ನು ಹಲವು ಬಾರಿ ಬಂಧಿಸಲಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ನಂತರ, ಸರಕು ಸಾಗಣೆ ವಾಹನದ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ಮಾರ್ಚ್ 19ರಂದು ಮಹದೇವಪುರದ ಮನೆಯೊಂದಕ್ಕೆ ಸರಕು ಸಾಗಣೆ ಮಾಡುತ್ತಿದ್ದ ವೇಳೆ ಮನೆ ಮಾಲೀಕರೊಬ್ಬರು, ಶೂ ರ್ಯಾಕ್ ಕೆಳಗೆ ಕೀ ಇಟ್ಟು ಹೋಗಿರುವುದನ್ನು ಗಮನಿಸಿದ್ದ. ಅವರು ಹೋದ ಬಳಿಕ ಕೀತೆಗೆದುಕೊಂಡು ಮನೆಯ ಬೀಗ ತೆಗೆದು ಮನೆಯೊಳಗೆ ನುಗ್ಗಿ ಬೀರು ಒಡೆದು ₹6 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ. ಇತ್ತ ಕೆಲಸ ಮುಗಿಸಿಕೊಂಡು ಮನೆ ಮಾಲೀಕರು ಹಿಂತಿರುಗಿದಾಗ ಕಳವು ನಡೆದಿರುವುದು ಗೊತ್ತಾಗಿತ್ತು’ ಎಂದು ಪೊಲೀಸರು ಹೇಳಿದರು.