‘ಅತ್ತಿಬೆಲೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿಇಬ್ಬರೂ ಆರೋಪಿಗಳು ಬೈಕ್ ಕಳವು ಮಾಡಿದ್ದರು. ಅದೇ ಬೈಕ್ನಲ್ಲಿ ಪ್ರತಿನಿತ್ಯ ಸಂಜೆ ಕೆ.ಆರ್.ಪುರಕ್ಕೆ ರಾತ್ರಿ ವೇಳೆ ಬಂದು, ಬೀಗ ಹಾಕಿದ ಮನೆಗಳಲ್ಲಿ ಗುರುತಿಸಿ ಬೀಗ ಒಡೆದು ಚಿನ್ನಾಭರಣ ಕಳವು ಮಾಡುತ್ತಿದ್ದರು. ಕದ್ದ ಚಿನ್ನಾಭರಣವನ್ನು ಮಾಲೂರಿನ ಫೈನಾನ್ಸ್ ಸಂಸ್ಥೆಯಲ್ಲಿ ಗಿರವಿ ಇಟ್ಟಿದ್ದರು. ಇನ್ನು ಕೆಲವು ಮನೆಗಳಲ್ಲಿ ಕದ್ದ ಆಭರಣಗಳನ್ನು ಮಾರಾಟ ಮಾಡಿದ್ದರು. ಅವುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.