<p><strong>ಬೆಂಗಳೂರು:</strong> ಬೀಗ ಹಾಕಿದ ಮನೆಗಳನ್ನು ಹಗಲು ವೇಳೆಯಲ್ಲಿ ಗುರುತಿಸಿ ರಾತ್ರಿ ನುಗ್ಗಿ ಕಳವು ಮಾಡುತ್ತಿದ್ದ ಕಳ್ಳನನ್ನು ಬಂಧಿಸಿರುವ ಸುದ್ದಗುಂಟೆ ಪಾಳ್ಯ ಪೊಲೀಸರು, ಆರೋಪಿಯಿಂದ ₹ 12 ಲಕ್ಷ ಮೌಲ್ಯದ ಕಳವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಆರ್. ಟಿ. ನಗರದ ರಹಮತ್ ನಗರ ನಿವಾಸಿ ಸಯ್ಯದ್ ಮಸೂದ್ (36) ಬಂಧಿತ ಆರೋಪಿ. ಬಂಧಿತನಿಂದ ₹ 6 ಲಕ್ಷ ನಗದು, 171 ಗ್ರಾಂ ಚಿನ್ನಾಭರಣ, ದ್ವಿಚಕ್ರ ವಾಹನ, ಒಂದು ಮೈಕ್ರೊ ಒವೆನ್, ಎರಡು ಸೀರೆ, ಎರಡು ಬೆಡ್ ಶೀಟ್, ಆಸ್ತಿ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಬಿಟಿಎಂ ಲೇಔಟ್ನ ಕೆಇಬಿ ಕಾಲೊನಿಯ ತಮ್ಮ ಮನೆಯಲ್ಲಿ ನಡೆದ ಕಳವು ಬಗ್ಗೆ ಅಬ್ದುಲ್ ರಶೀದ್ ಮೇಕ್ರಿ ಎಂಬುವರು ಸುದ್ದಗುಂಟೆ ಪಾಳ್ಯ ಠಾಣೆಯಲ್ಲಿ ದೂರು ನೀಡಿದ್ದರು. ಆರೋಪಿಯ ಪತ್ತೆಗೆ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.</p>.<p><strong>ಕಂಪ್ಯೂಟರ್ ಮಳಿಗೆ ಮಾಲೀಕನ ಸುಲಿಗೆ</strong>: ಬಸವನಗುಡಿ ಇ.ಎ.ಟಿ ರಸ್ತೆಯಲ್ಲಿರುವ ‘ಮಂಜುನಾಥ್ ಡಿಟಿಪಿ’ ಕಂಪ್ಯೂಟರ್ ಮಳಿಗೆ ಮಾಲೀಕನಿಗೆ ಮಾರಕಾಸ್ತ್ರ ತೋರಿಸಿ ಸುಲಿಗೆ ಮಾಡಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.</p>.<p>‘ಮೇ 16ರಂದು ನಡೆದಿರುವ ಕೃತ್ಯ ಸಂಬಂಧ ಮಾಲೀಕ ಎಸ್. ಮೋಹನ್ (51) ಎಂಬುವರು ದೂರು ನೀಡಿದ್ದಾರೆ. ಮೂವರು ಅಪರಿಚಿತರು ಕೃತ್ಯ ಎಸಗಿದ್ದು, ಅವರ ಪತ್ತೆಗಾಗಿ ತನಿಖೆ ಮುಂದುವರಿದಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೀಗ ಹಾಕಿದ ಮನೆಗಳನ್ನು ಹಗಲು ವೇಳೆಯಲ್ಲಿ ಗುರುತಿಸಿ ರಾತ್ರಿ ನುಗ್ಗಿ ಕಳವು ಮಾಡುತ್ತಿದ್ದ ಕಳ್ಳನನ್ನು ಬಂಧಿಸಿರುವ ಸುದ್ದಗುಂಟೆ ಪಾಳ್ಯ ಪೊಲೀಸರು, ಆರೋಪಿಯಿಂದ ₹ 12 ಲಕ್ಷ ಮೌಲ್ಯದ ಕಳವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಆರ್. ಟಿ. ನಗರದ ರಹಮತ್ ನಗರ ನಿವಾಸಿ ಸಯ್ಯದ್ ಮಸೂದ್ (36) ಬಂಧಿತ ಆರೋಪಿ. ಬಂಧಿತನಿಂದ ₹ 6 ಲಕ್ಷ ನಗದು, 171 ಗ್ರಾಂ ಚಿನ್ನಾಭರಣ, ದ್ವಿಚಕ್ರ ವಾಹನ, ಒಂದು ಮೈಕ್ರೊ ಒವೆನ್, ಎರಡು ಸೀರೆ, ಎರಡು ಬೆಡ್ ಶೀಟ್, ಆಸ್ತಿ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಬಿಟಿಎಂ ಲೇಔಟ್ನ ಕೆಇಬಿ ಕಾಲೊನಿಯ ತಮ್ಮ ಮನೆಯಲ್ಲಿ ನಡೆದ ಕಳವು ಬಗ್ಗೆ ಅಬ್ದುಲ್ ರಶೀದ್ ಮೇಕ್ರಿ ಎಂಬುವರು ಸುದ್ದಗುಂಟೆ ಪಾಳ್ಯ ಠಾಣೆಯಲ್ಲಿ ದೂರು ನೀಡಿದ್ದರು. ಆರೋಪಿಯ ಪತ್ತೆಗೆ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.</p>.<p><strong>ಕಂಪ್ಯೂಟರ್ ಮಳಿಗೆ ಮಾಲೀಕನ ಸುಲಿಗೆ</strong>: ಬಸವನಗುಡಿ ಇ.ಎ.ಟಿ ರಸ್ತೆಯಲ್ಲಿರುವ ‘ಮಂಜುನಾಥ್ ಡಿಟಿಪಿ’ ಕಂಪ್ಯೂಟರ್ ಮಳಿಗೆ ಮಾಲೀಕನಿಗೆ ಮಾರಕಾಸ್ತ್ರ ತೋರಿಸಿ ಸುಲಿಗೆ ಮಾಡಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.</p>.<p>‘ಮೇ 16ರಂದು ನಡೆದಿರುವ ಕೃತ್ಯ ಸಂಬಂಧ ಮಾಲೀಕ ಎಸ್. ಮೋಹನ್ (51) ಎಂಬುವರು ದೂರು ನೀಡಿದ್ದಾರೆ. ಮೂವರು ಅಪರಿಚಿತರು ಕೃತ್ಯ ಎಸಗಿದ್ದು, ಅವರ ಪತ್ತೆಗಾಗಿ ತನಿಖೆ ಮುಂದುವರಿದಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>