ರಸೆಲ್ ಮಾರುಕಟ್ಟೆಯ ಹಿಂಭಾಗದಲ್ಲಿರುವ ಮೀನಿನ ಮಾರುಕಟ್ಟೆ. -ಪ್ರಜಾವಾಣಿ ಚಿತ್ರ/ ರಂಜು ಪಿ.
ಎಪಿಎಂಸಿ ಮಾರುಕಟ್ಟೆಗಳಲ್ಲಿ ಸ್ವಚ್ಛತೆ ಮರೀಚಿಕೆ ಆಗಿದೆ. ನಿರ್ವಹಣೆಯ ಕೊರತೆಯಿಂದ ಮಾರುಕಟ್ಟೆ ಪ್ರಾಂಗಣ ಗಬ್ಬೆದ್ದು ನಾರುತ್ತದೆ. ಪ್ರತಿ ಚುನಾವಣೆಯಲ್ಲಿ ಮಾರುಕಟ್ಟೆ ಅಭಿವೃದ್ಧಿ ಬಗ್ಗೆ ರಾಜಕಾರಣಿಗಳು ಭರವಸೆ ನೀಡುತ್ತಾರೆ ಅಷ್ಟೆ. ಅದು ಈಡೇರುವುದಿಲ್ಲ.
-ಸುರೇಶ, ಜೆ.ಸಿ ಮಾರುಕಟ್ಟೆಯ ವರ್ತಕ
ಕೆ.ಆರ್. ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಸ್ಮಾರ್ಟ್ಸಿಟಿ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸಬೇಕು. ಕೆ.ಆರ್. ಮಾರುಕಟ್ಟೆ ಮೆಟ್ರೊ ನಿಲ್ದಾಣದಿಂದ ಮಾರುಕಟ್ಟೆ ಪ್ರಾಂಗಣಕ್ಕೆ ಸಂಪರ್ಕಿಸುವ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕು. ಹಬ್ಬದ ಸಂದರ್ಭದಲ್ಲಿ ಸಂಚಾರದಟ್ಟಣೆ ಉಂಟಾಗುತ್ತಿದ್ದು ಅದರ ನಿವಾರಣೆಗೆ ಕ್ರಮ ಕೈಗೊಳ್ಳಬೇಕು.
-ದಿವಾಕರ್, ಕೆ.ಆರ್. ಮಾರುಕಟ್ಟೆ ವರ್ತಕರ ಸಂಘದ ಅಧ್ಯಕ್ಷ
ಶಿವಾಜಿನಗರದಲ್ಲಿರುವ ರಸೆಲ್ ಮಾರುಕಟ್ಟೆಯಲ್ಲಿ ಸ್ವಚ್ಛತೆ ಇಲ್ಲ. ಮಾರುಕಟ್ಟೆ ಸಂಪೂರ್ಣ ಅಭಿವೃದ್ಧಿ ಆಗಬೇಕಿದೆ. ಚುನಾವಣೆ ಸಂದರ್ಭದಲ್ಲಿ ಮಾತ್ರ ಮಾರುಕಟ್ಟೆಯ ಅಭಿವೃದ್ಧಿ ಬಗ್ಗೆ ಮಾತನಾಡುವ ಜನಪ್ರತಿನಿಧಿಗಳು ಗೆದ್ದ ನಂತರ ಇತ್ತ ಸುಳಿಯುವುದೇ ಇಲ್ಲ.
-ಮನೋಹರ್ ಸಲ್ಮಾನ್, ಮೀನು ಮಾರಾಟಗಾರರು ರಸೆಲ್ ಮಾರುಕಟ್ಟೆ