ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್, ‘ಇಡೀ ರಾಜ್ಯದಲ್ಲಿ 23 ಸಾವಿರ ಮದ್ಯದಂಗಡಿಗಳಿವೆ. ಆದರೆ, ಕೇವಲ 61 ಪುಸ್ತಕ ಮಳಿಗೆಗಳಿವೆ. ಬೆಂಗಳೂರಿನಿಂದ 60 ಕಿ.ಮೀ. ದೂರದಲ್ಲಿರುವ ಕೋಲಾರದಲ್ಲಿ ಒಂದೇ ಒಂದು ಪುಸ್ತಕ ಮಳಿಗೆ ಇಲ್ಲ. ಉತ್ತರ ಕನ್ನಡದಲ್ಲಿ ಒಂದೇ ಒಂದು ಪುಸ್ತಕದ ಮಳಿಗೆಯಿದೆ. ಬೆಂಗಳೂರಿನ ರಸ್ತೆ ರಿಪೇರಿಗೆ ವರ್ಷಕ್ಕೆ ₹ 800 ಕೋಟಿ ಖರ್ಚು ಮಾಡುವ ರಾಜ್ಯ ಸರ್ಕಾರ, ಪುಸ್ತಕ ಖರೀದಿಗೆ ₹ 15 ಕೋಟಿ ಅನುದಾನ ನೀಡುತ್ತದೆ’ ಎಂದು ಬೇಸರ ವ್ಯಕ್ತಪಡಿಸಿದರು.