‘ವಿಜಯಪುರ ಸರ್ಕಲ್ ಇನ್ಸ್ಪೆಕ್ಟರ್ ಟಿ.ಶ್ರೀನಿವಾಸ್, ಎಎಸ್ಐಗಳಾದ ಎನ್. ಶುಭಾ, ಕೆ.ಜಿ. ಅನಿತ ಎಂಬವರ ವಿರುದ್ಧ ದೂರು ಕೇಳಿಬಂದಿತ್ತು. ಈ ಅಧಿಕಾರಿಗಳ ದೂರವಾಣಿಕರೆ ಮಾಹಿತಿ ಪಡೆಯಲಾಗಿದೆ. ಕ್ರಷರ್ ಮಾಲೀಕರಿಗೆ ಸಹಾಯ ಮಾಡುವ ಮಾತುಕತೆ ನಡೆಸಿ, ನಂಬಿಸಿ ₹ 5 ಲಕ್ಷ ಪಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಕಾರಣಕ್ಕೆ ಟಿ. ಶ್ರೀನಿವಾಸ್ ಅವರನ್ನು ಅಮಾನತು ಮಾಡಲಾಗಿದೆ. ಎಎಸ್ಐಗಳ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗಿದೆ. ವಿಚಾರಣೆಯಲ್ಲಿ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಪಾತ್ರ ಕಂಡುಬಂದಿಲ್ಲ’ ಎಂದರು.