ನಗರದಲ್ಲಿನ ಸಾಂಸ್ಕೃತಿಕ ಸಂಘ–ಸಂಸ್ಥೆಗಳಿಗೆ ಸುಲಭವಾಗಿ ದೊರೆಯುತ್ತಿದ್ದ ಸಾಂಸ್ಕೃತಿಕ ಸಮುಚ್ಚಯದಲ್ಲಿ ತಿಂಗಳ ಬಹುತೇಕ ದಿನ ಒಂದಲ್ಲ ಒಂದು ಕಲಾ ಚಟುವಟಿಕೆ ನಡೆಯುತ್ತಿತ್ತು. ಆದರೆ, ಎರಡು ವರ್ಷಗಳ ಹಿಂದೆ ಶಾರ್ಟ್ ಸರ್ಕೀಟ್ನಿಂದ ಬೆಂಕಿ ಅವಘಡ ಘಟಿಸಿ ಅಲ್ಲಿನ ಧ್ವನಿ–ಬೆಳಕಿನ ವ್ಯವಸ್ಥೆ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಅದನ್ನು ದುರಸ್ತಿಪಡಿಸಿ ಮತ್ತೆ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ಕಲಾವಿದರು ಪ್ರತಿಭಟಿಸಿದ್ದರು. ಅದರ ದುರಸ್ತಿಗೆ ಲಕ್ಷಾಂತರ ರೂಪಾಯಿಯನ್ನು ಖರ್ಚು ಮಾಡಲಾಗಿತ್ತು. ಅಲ್ಲಿ ಇನ್ನೂ ರಂಗ ಚಟುವಟಿಕೆ ಪ್ರಾರಂಭ ಮಾಡದಿರುವುದು ಕಲಾವಿದರ ಆಕ್ರೋಶಕ್ಕೆ ಕಾರಣವಾಗಿದೆ.