‘19ನೇ ಶತಮಾನ ಕಳೆದು 20ನೇ ಶತಮಾನದ 20 ವರ್ಷಗಳು ಕಳೆದು ಹೋಗಿವೆ. 50 ವರ್ಷ ಗಾಢ ನಿದ್ದೆೆಯಲ್ಲಿದ್ದ ಅರ್ಜಿದಾರ ಫಲಾನುಭವಿಗಳು, ‘ಈಗ ಕೋರ್ಟ್ಗೆ ಹೋಗಲು ಸೂಕ್ತ ಸಮಯ’ ಎಂದು ದೈವವಾಣಿ ಕೇಳಿಸಿಕೊಂಡು ನಿದ್ದೆೆಯಿಂದ ಎದ್ದವರಂತೆ ಕೋರ್ಟ್ಗೆ ಬಂದಿದ್ದಾರೆ. ಗಾಢ ನಿದ್ದೆೆಯಲ್ಲಿದ್ದವರಿಗೆ ಹೈಕೋರ್ಟ್ ನೆರವು ನೀಡುತ್ತದೆ ಎಂದು ನಿರೀಕ್ಷೆೆ ಮಾಡುತ್ತೀರಾ?ನಿದ್ರಾವಸ್ಥೆೆಯಲ್ಲಿದ್ದವರಿಗೆ ಸಹಾಯ ಮಾಡಲು ಈ ಕೋರ್ಟ್ ಇಲ್ಲ. ಜಾಗೃತ ಸ್ಥಿತಿಯಲ್ಲಿದ್ದವರಿಗೆ ನೆರವು ನೀಡಬಹುದು. ಕೆಲವೊಂದು ವಿಶೇಷ ಸಂದರ್ಭಗಳಲ್ಲಿ ವಿಳಂಬವನ್ನು ಮನ್ನಿಸಬಹುದು. ಆದರೆ, ದಶಕಗಳ ವಿಳಂಬವನ್ನು ಒಪ್ಪಲು ಸಾಧ್ಯವಿಲ್ಲ. ಇದೊಂದೇ ಪ್ರಕರಣ ಅಲ್ಲ, ಇಂತಹ ಅನೇಕ ಅರ್ಜಿಗಳು ಬರುತ್ತಿದೆ. ಈಗ ದೊಡ್ಡ ಮೊತ್ತದ ದಂಡ ವಿಧಿಸಲು ಆರಂಭಿಸಬೇಕೆನಿಸುತ್ತದೆ. ಪಿಐಎಲ್ಗಳಿಗೆ ನಮ್ಮ ವಿರೋಧವಿಲ್ಲ. ಆದರೆ, ಇಂತಹ ಪಿಎಎಲ್ಗಳಿಗೆ ತೀವ್ರ ಆಕ್ಷೇಪವಿದೆ‘ ಎಂದು ಹೇಳಿತು.