<p><strong>ಬೆಂಗಳೂರು</strong>: ‘ಟಿ.ವಿ ಧಾರಾವಾಹಿಗಳಲ್ಲಿ ಹೆಣ್ಣುಮಕ್ಕಳನ್ನು ವಿಲನ್ ರೀತಿಯಲ್ಲಿ ಬಿಂಬಿಸಿ ದ್ವೇಷ ಬಿತ್ತುವ ಬದಲು ಜನಪದ, ಸಾಹಿತ್ಯ, ಗಾದೆ, ಒಗಟುಗಳ ಮೂಲಕ ಜನರಲ್ಲಿ ಕಲೆ, ಸಂಸ್ಕೃತಿಯ ಒಲವು ಹೆಚ್ಚಿಸಿ’ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಸಲಹೆ ನೀಡಿದರು.</p>.<p>ಕರ್ನಾಟಕ ಜಾನಪದ ಪರಿಷತ್ತು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ 2025ನೇ ಸಾಲಿನ ನಾಡೋಜ ಎಚ್.ಎಲ್.ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿಯನ್ನು ತಮಿಳುನಾಡಿನ ತೆರುಕೂತು ಕಲಾವಿದ ಟಿ.ಲಕ್ಷ್ಮೀಪತಿ ಅವರಿಗೆ ಪ್ರದಾನ ಮಾಡಿ ಮಾತನಾಡಿದರು.</p>.<p>‘ಜನರು ಹೆಚ್ಚಾಗಿ ನೋಡುವ ಟಿ.ವಿ ಧಾರಾವಾಹಿಗಳಲ್ಲಿ ಮೌಲ್ಯಾಧಾರಿತ ವಿಷಯಗಳಿಗೆ ಆದ್ಯತೆ ನೀಡಬೇಕು. ಜನಪದ ಮಹತ್ವದ ವಿಚಾರವನ್ನು ಸೇರಿಸಿದಾಗ ಅದು ನಮ್ಮ ಕಲೆ, ಸಂಸ್ಕೃತಿಯನ್ನು ಗೌರವಿಸಿದಂತೆ. ಜನಪದ ಕಲೆಯನ್ನು ಉಳಿಸಿ ಬೆಳೆಸುವ ಪ್ರಯತ್ನ ನಮ್ಮಿಂದಲೇ ಆಗಬೇಕು’ ಎಂದು ಹೇಳಿದರು.</p>.<p>ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, ‘ಹಿರಿಯ ಅಧಿಕಾರಿಯಾಗಿದ್ದ ನಾಗೇಗೌಡರು ನೆಲ ಸಂಸ್ಕೃತಿ, ಮೂಲ ಬೇರನ್ನು ಮರೆಯಲಿಲ್ಲ. ಲೇಖಕರಾಗಿ, ಜನಪದ ವಿದ್ವಾಂಸರಾಗಿ, ಕ್ಷೇತ್ರ ಕಾರ್ಯದ ಮೂಲಕ ಜಾನಪದ ಲೋಕ ಹಾಗೂ ಪರಿಷತ್ತನ್ನು ಸ್ಥಾಪಿಸಿ ಕಲೆ ಉಳಿಸಲು ಶ್ರಮಿಸಿದರು’ ಎಂದು ಹೇಳಿದರು.</p>.<p>ಆದಿಚುಂಚನಗಿರಿ ಮಠದ ಸೌಮ್ಯನಾಥ ಸ್ವಾಮೀಜಿ, ಜಾನಪದ ಪರಿಷತ್ತಿನ ಅಧ್ಯಕ್ಷ ಹಿ.ಚಿ.ಬೋರಲಿಂಗಯ್ಯ, ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಟಿ.ವಿ ಧಾರಾವಾಹಿಗಳಲ್ಲಿ ಹೆಣ್ಣುಮಕ್ಕಳನ್ನು ವಿಲನ್ ರೀತಿಯಲ್ಲಿ ಬಿಂಬಿಸಿ ದ್ವೇಷ ಬಿತ್ತುವ ಬದಲು ಜನಪದ, ಸಾಹಿತ್ಯ, ಗಾದೆ, ಒಗಟುಗಳ ಮೂಲಕ ಜನರಲ್ಲಿ ಕಲೆ, ಸಂಸ್ಕೃತಿಯ ಒಲವು ಹೆಚ್ಚಿಸಿ’ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಸಲಹೆ ನೀಡಿದರು.</p>.<p>ಕರ್ನಾಟಕ ಜಾನಪದ ಪರಿಷತ್ತು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ 2025ನೇ ಸಾಲಿನ ನಾಡೋಜ ಎಚ್.ಎಲ್.ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿಯನ್ನು ತಮಿಳುನಾಡಿನ ತೆರುಕೂತು ಕಲಾವಿದ ಟಿ.ಲಕ್ಷ್ಮೀಪತಿ ಅವರಿಗೆ ಪ್ರದಾನ ಮಾಡಿ ಮಾತನಾಡಿದರು.</p>.<p>‘ಜನರು ಹೆಚ್ಚಾಗಿ ನೋಡುವ ಟಿ.ವಿ ಧಾರಾವಾಹಿಗಳಲ್ಲಿ ಮೌಲ್ಯಾಧಾರಿತ ವಿಷಯಗಳಿಗೆ ಆದ್ಯತೆ ನೀಡಬೇಕು. ಜನಪದ ಮಹತ್ವದ ವಿಚಾರವನ್ನು ಸೇರಿಸಿದಾಗ ಅದು ನಮ್ಮ ಕಲೆ, ಸಂಸ್ಕೃತಿಯನ್ನು ಗೌರವಿಸಿದಂತೆ. ಜನಪದ ಕಲೆಯನ್ನು ಉಳಿಸಿ ಬೆಳೆಸುವ ಪ್ರಯತ್ನ ನಮ್ಮಿಂದಲೇ ಆಗಬೇಕು’ ಎಂದು ಹೇಳಿದರು.</p>.<p>ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, ‘ಹಿರಿಯ ಅಧಿಕಾರಿಯಾಗಿದ್ದ ನಾಗೇಗೌಡರು ನೆಲ ಸಂಸ್ಕೃತಿ, ಮೂಲ ಬೇರನ್ನು ಮರೆಯಲಿಲ್ಲ. ಲೇಖಕರಾಗಿ, ಜನಪದ ವಿದ್ವಾಂಸರಾಗಿ, ಕ್ಷೇತ್ರ ಕಾರ್ಯದ ಮೂಲಕ ಜಾನಪದ ಲೋಕ ಹಾಗೂ ಪರಿಷತ್ತನ್ನು ಸ್ಥಾಪಿಸಿ ಕಲೆ ಉಳಿಸಲು ಶ್ರಮಿಸಿದರು’ ಎಂದು ಹೇಳಿದರು.</p>.<p>ಆದಿಚುಂಚನಗಿರಿ ಮಠದ ಸೌಮ್ಯನಾಥ ಸ್ವಾಮೀಜಿ, ಜಾನಪದ ಪರಿಷತ್ತಿನ ಅಧ್ಯಕ್ಷ ಹಿ.ಚಿ.ಬೋರಲಿಂಗಯ್ಯ, ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>