ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್, ‘ಉದಯಕುಮಾರ್ ಅವರ ನೇಮಕ ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವುದು ಸೂಕ್ತ ಎನ್ನಿಸುವುದಿಲ್ಲ. ಆದರೆ, ವರ್ಗಾವಣೆ ವೇಳೆ ಸಾರ್ವಜನಿಕ ಹಿತಾಸಕ್ತಿಯನ್ನು ಸರ್ಕಾರ ಹೊಂದಿರಬೇಕು. ಹಾಗೆ ಮಾಡಿದರೆ ಅನಗತ್ಯ ವ್ಯಾಜ್ಯಗಳು ಕಡಿಮೆಯಾಗುತ್ತವೆ’ ಎಂದರು.