<p><strong>ಬೆಂಗಳೂರು</strong>: ನಗರದ ಹಲವು ಮನೆಗಳಲ್ಲಿ ಕಳವು ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ.</p>.<p>‘ಮಾಗಡಿ ತಾಲ್ಲೂಕಿನ ಸುನೀಲ್ (30) ಹಾಗೂ ಹೆಬ್ಬಾಳ ಗುಡ್ಡದಹಳ್ಳಿಯ ಸೋಮಣ್ಣ ಲೇಔಟ್ನ ಹೇಮಂತ್ (23) ಬಂಧಿತರು. ಅವರಿಂದ ₹ 10 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹ 4,890 ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಹೆಬ್ಬಾಳದ ಪಿಳೇಕಮ್ಮ ದೇವಸ್ಥಾನ ಬಳಿ ಸುತ್ತಾಡುತ್ತಿದ್ದ ಆರೋಪಿಗಳು, ತಮ್ಮ ಬಳಿ ಇದ್ದ ಚಿನ್ನಾಭರಣ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಕಡಿಮೆ ಬೆಲೆಗೆ ಚಿನ್ನಾಭರಣ ನೀಡುವುದಾಗಿ ಸಾರ್ವಜನಿಕರಿಗೆ ಹೇಳುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಸ್ಥಳಕ್ಕೆ ಹೋಗಿ ಆರೋಪಿಗಳನ್ನು ವಶಕ್ಕೆ ಪಡೆಯಲಾಯಿತು’ ಎಂದೂ ತಿಳಿಸಿದರು.</p>.<p class="Subhead"><strong>ಹಗಲಿನಲ್ಲಿ ಮನೆ ಗುರುತು:</strong> ‘ಲಾರಿ ಚಾಲಕನಾಗಿದ್ದ ಸುನೀಲ್, ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ಹೇಮಂತ್ ಜೊತೆ ಸ್ನೇಹ ಬೆಳೆಸಿದ್ದ. ನಂತರ ಅವರಿಬ್ಬರೂ ಸೇರಿ ಕಳ್ಳತನ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ನಗರದ ಪ್ರಮುಖ ರಸ್ತೆಗಳಲ್ಲಿ ಹಗಲಿನಲ್ಲಿ ಬೀಗ ಹಾಕಿರುತ್ತಿದ್ದ ಮನೆಗಳನ್ನು ಗುರುತಿಸುತ್ತಿದ್ದರು. ಅಂಥ ಮನೆಗಳಿಗೆ ರಾತ್ರಿ ಹೋಗಿ, ಕಬ್ಬಿಣದ ರಾಡ್ನಿಂದ ಬೀಗ ಮುರಿದು ಕೃತ್ಯ ಎಸಗಿ ಪರಾರಿಯಾಗುತ್ತಿದ್ದರು.’</p>.<p>‘ಆರ್.ಟಿ.ನಗರದ ಸೀತಪ್ಪ ಲೇಔಟ್ನ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳು, ಚಿನ್ನಾಭರಣ ಹಾಗೂ ನಗದು ಕದ್ದುಕೊಂಡು ಪರಾರಿಯಾಗಿದ್ದರು. ಸಂಜಯನಗರ ಹಾಗೂ ಕುಣಿಗಲ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ಎಂದೂ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಹಲವು ಮನೆಗಳಲ್ಲಿ ಕಳವು ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ.</p>.<p>‘ಮಾಗಡಿ ತಾಲ್ಲೂಕಿನ ಸುನೀಲ್ (30) ಹಾಗೂ ಹೆಬ್ಬಾಳ ಗುಡ್ಡದಹಳ್ಳಿಯ ಸೋಮಣ್ಣ ಲೇಔಟ್ನ ಹೇಮಂತ್ (23) ಬಂಧಿತರು. ಅವರಿಂದ ₹ 10 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹ 4,890 ನಗದು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಹೆಬ್ಬಾಳದ ಪಿಳೇಕಮ್ಮ ದೇವಸ್ಥಾನ ಬಳಿ ಸುತ್ತಾಡುತ್ತಿದ್ದ ಆರೋಪಿಗಳು, ತಮ್ಮ ಬಳಿ ಇದ್ದ ಚಿನ್ನಾಭರಣ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಕಡಿಮೆ ಬೆಲೆಗೆ ಚಿನ್ನಾಭರಣ ನೀಡುವುದಾಗಿ ಸಾರ್ವಜನಿಕರಿಗೆ ಹೇಳುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಸ್ಥಳಕ್ಕೆ ಹೋಗಿ ಆರೋಪಿಗಳನ್ನು ವಶಕ್ಕೆ ಪಡೆಯಲಾಯಿತು’ ಎಂದೂ ತಿಳಿಸಿದರು.</p>.<p class="Subhead"><strong>ಹಗಲಿನಲ್ಲಿ ಮನೆ ಗುರುತು:</strong> ‘ಲಾರಿ ಚಾಲಕನಾಗಿದ್ದ ಸುನೀಲ್, ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ಹೇಮಂತ್ ಜೊತೆ ಸ್ನೇಹ ಬೆಳೆಸಿದ್ದ. ನಂತರ ಅವರಿಬ್ಬರೂ ಸೇರಿ ಕಳ್ಳತನ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ನಗರದ ಪ್ರಮುಖ ರಸ್ತೆಗಳಲ್ಲಿ ಹಗಲಿನಲ್ಲಿ ಬೀಗ ಹಾಕಿರುತ್ತಿದ್ದ ಮನೆಗಳನ್ನು ಗುರುತಿಸುತ್ತಿದ್ದರು. ಅಂಥ ಮನೆಗಳಿಗೆ ರಾತ್ರಿ ಹೋಗಿ, ಕಬ್ಬಿಣದ ರಾಡ್ನಿಂದ ಬೀಗ ಮುರಿದು ಕೃತ್ಯ ಎಸಗಿ ಪರಾರಿಯಾಗುತ್ತಿದ್ದರು.’</p>.<p>‘ಆರ್.ಟಿ.ನಗರದ ಸೀತಪ್ಪ ಲೇಔಟ್ನ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳು, ಚಿನ್ನಾಭರಣ ಹಾಗೂ ನಗದು ಕದ್ದುಕೊಂಡು ಪರಾರಿಯಾಗಿದ್ದರು. ಸಂಜಯನಗರ ಹಾಗೂ ಕುಣಿಗಲ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಕೃತ್ಯ ಎಸಗಿರುವುದು ತನಿಖೆಯಿಂದ ಗೊತ್ತಾಗಿದೆ’ಎಂದೂ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>