ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಡು ರಸ್ತೆಯಲ್ಲೇ ಕುರಿ ಕಡಿದರು; ಪೊಲೀಸರು ಕೇಸು ಜಡಿದರು..!

Published 26 ಅಕ್ಟೋಬರ್ 2023, 14:06 IST
Last Updated 26 ಅಕ್ಟೋಬರ್ 2023, 14:06 IST
ಅಕ್ಷರ ಗಾತ್ರ

ಬೆಂಗಳೂರು: ಸೀಗೆಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಮಚ್ಚಿನಿಂದ ಕುರಿಯ ಶಿರಚ್ಛೇದ ಮಾಡಲಾಗಿದ್ದು, ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ವಿಡಿಯೊ ಆಧರಿಸಿ ಎಫ್‌ಐಆರ್ ದಾಖಲಿಸಿಕೊಂಡಿರುವ ಕಾಡುಗೋಡಿ ಪೊಲೀಸರು, ಸ್ಥಳೀಯರನ್ನು ವಿಚಾರಣೆ ನಡೆಸುತ್ತಿದ್ದಾರೆ.

‘ಸೀಗೆಹಳ್ಳಿಯಲ್ಲಿ ಇತ್ತೀಚೆಗೆ ಊರ ಹಬ್ಬವಿತ್ತು. ಹರಕೆ ಹೊತ್ತಿದ್ದ ಜನರು, ಕುರಿಗಳನ್ನು ಬಲಿ ಕೊಟ್ಟಿರುವುದಾಗಿ ಗೊತ್ತಾಗಿದೆ. ವ್ಯಕ್ತಿಯೊಬ್ಬ, ಪಂಚಾಯಿತಿ ಕಚೇರಿ ಎದುರೇ ಕುರಿಯೊಂದರ ಶಿರಚ್ಛೇದ ಮಾಡಿದ್ದಾನೆ. ಇದೇ ವಿಡಿಯೊವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿರುವ ಸ್ಥಳೀಯರೊಬ್ಬರು, ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ವಿಡಿಯೊದಲ್ಲಿರುವ ವ್ಯಕ್ತಿಗಳು ಯಾರು ಎಂಬುದನ್ನು ಪತ್ತೆ ಮಾಡಲು ಸ್ಥಳೀಯರನ್ನು ವಿಚಾರಣೆ ನಡೆಸಲಾಗುತ್ತಿದೆ. ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ’ ಎಂದು ತಿಳಿಸಿವೆ.

ಪೊಲೀಸರು ಏನು ಮಾಡುತ್ತಿದ್ದಾರೆ: ‘ನಡುರಸ್ತೆಯಲ್ಲೇ ಕುರಿಯ ತಲೆಯನ್ನು ಕಡಿಲಾಗಿದೆ. ಸ್ಥಳದಲ್ಲಿ ಬಿದ್ದು ಒದ್ದಾಡಿ ಕುರಿ ಸತ್ತಿದೆ. ಇದೆಲ್ಲ ನಡೆಯುತ್ತಿದ್ದರೂ ಪೊಲೀಸರು ಏನು ಮಾಡುತ್ತಿದ್ದಾರೆ. ನಗರದಲ್ಲಿ ಪೊಲೀಸರ ಗಸ್ತು ಇಲ್ಲವೇ’ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಜನರು ಪ್ರಶ್ನಿಸಿದ್ದಾರೆ.

‘ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದರೆ ಸಾಲದು, ಅವರನ್ನು ಪತ್ತೆ ಮಾಡಿ ಜೈಲಿಗೆ ಕಳುಹಿಸಬೇಕು. ಮುಂದೆ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT