<p><strong>ಯಲಹಂಕ:</strong> ಬ್ಯಾಟರಾಯನಪುರ ಕ್ಷೇತ್ರದ ಸಂಪಿಗೇಹಳ್ಳಿ ವಾರ್ಡ್ ವ್ಯಾಪ್ತಿಯ ತಿರುಮೇನಹಳ್ಳಿ ಕೆರೆಗೆ ಸುತ್ತಮುತ್ತಲ ಅಪಾರ್ಟ್ಮೆಂಟ್ಗಳು ಹಾಗೂ ವಿಲ್ಲಾಗಳಿಂದ ಹರಿದುಬರುವ ಕೊಳಚೆ ನೀರು ಸೇರುತ್ತಿದೆ. ಇದರಿಂದ ಕೆರೆಯ ನೀರು ಕಲುಷಿತಗೊಂಡಿದೆ.</p>.<p>20 ಎಕರೆ ವಿಸ್ತೀರ್ಣದ ಕೆರೆಯನ್ನು ಲಕ್ಷಾಂತರ ರೂಪಾಯಿ ಖರ್ಚುಮಾಡಿ, ತಂತಿಬೇಲಿ, ಕಲ್ಲಿನ ಹೊದಿಕೆ, ನಡಿಗೆಪಥ ಹಾಗೂ ವಿಶ್ರಾಂತಿಗಾಗಿ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಮೂರು ಚಿಕ್ಕ ನಡುಗಡ್ಡೆಗಳು, ಸುತ್ತಲೂ ಹಸಿರು ವಾತಾವರಣ, ತೆರೆದ ಜಿಮ್ ಹಾಗೂ ಮಕ್ಕಳ ಆಟದ ಸಾಮಗ್ರಿಗಳನ್ನು ಅಳವಡಿಸಲಾಗಿದೆ. ಕೆರೆಯ ಪಕ್ಕದಲ್ಲೇ ಹೊಸದಾಗಿ ರಾಜಕಾಲುವೆಯನ್ನೂ ನಿರ್ಮಿಸಲಾಗಿದೆ. ಆದರೆ ಸುತ್ತಮುತ್ತಲಿನ ಅಪಾರ್ಟ್ಮೆಂಟ್ಗಳು ಮತ್ತು ವಿಲ್ಲಾಗಳಿಂದ ಕೊಳಚೆನೀರು ನೇರವಾಗಿ ಕೆರೆಗೆ ಸೇರುತ್ತಿರುವುದು ಪರಿಸರ ಹಾನಿಗೆ ಕಾರಣವಾಗಿದೆ. ಇದನ್ನು ತಡೆಗಟ್ಟಬೇಕೆಂದು ಬೆಂಗಳೂರು ಜಲಮಂಡಳಿ ಮತ್ತು ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಅಗ್ರಹಾರ ಬಡಾವಣೆಯ ಸುತ್ತಮುತ್ತಲ ಅಪಾರ್ಟ್ಮೆಂಟ್ಗಳು ಹಾಗೂ ಹೆಗಡೆನಗರ ಮುಖ್ಯರಸ್ತೆಯ ಹಜ್ ಭವನದ ಕಡೆಯಿಂದ ರಾಜಕಾಲುವೆ ಮೂಲಕ ಹರಿದುಬರುವ ಕೊಳಚೆನೀರು ನೇರವಾಗಿ ಕೆರೆಗೆ ಸೇರುತ್ತಿದೆ. ಕೆರೆಯ ಪಕ್ಕದಲ್ಲೇ ತಿರುಮೇನಹಳ್ಳಿ-ಅಗ್ರಹಾರ ಬಡಾವಣೆ ಮುಖ್ಯರಸ್ತೆಯು ಹಾದುಹೋಗಿದೆ. ಈ ಮಾರ್ಗದಲ್ಲಿ ಪ್ರತಿದಿನ ಸಂಚರಿಸುವ ಸಾವಿರಾರು ವಾಹನ ಸವಾರರು, ಪಾದಚಾರಿಗಳು ಮತ್ತು ವಾಯುವಿಹಾರಿಗಳು ಕಿರಿಕಿರಿ ಅನುಭವಿಸುವಂತಾಗಿದೆ ಎಂದು ಅಗ್ರಹಾರ ಬಡಾವಣೆ ನಿವಾಸಿ ಎನ್.ನರಸಿಂಹಮೂರ್ತಿ ದೂರಿದರು.</p>.<p>ಈ ಹಿಂದೆ ಕೆರೆಯಲ್ಲಿ ನೆಲೆಸಿದ್ದ ವಿವಿಧ ಪಕ್ಷಿಗಳು, ಈಗ ಬೇರೆಡೆಗೆ ವಲಸೆ ಹೋಗಿವೆ. ವಿಷಕಾರಿ ನೀರಿನ ಪರಿಣಾಮ, ಮೀನುಗಳು ನಿರಂತರವಾಗಿ ಸಾಯುತ್ತಿವೆ. ಅಲ್ಲದೆ ಕೆರೆಯ ಸುತ್ತಲಿನ ಪ್ರದೇಶಗಳ ಕೊಳವೆಬಾವಿಗಳಲ್ಲೂ ಅಂತರ್ಜಲ ಕಲುಷಿತಗೊಂಡು ಕುಡಿಯಲು ಯೋಗ್ಯವಿಲ್ಲದಂತಾಗಿದೆ. ಕೆರೆಯ ಸಮೀಪದಲ್ಲೇ ವಾಸದ ಮನೆಗಳಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕೆರೆ ಸುತ್ತ ವಿದ್ಯುತ್ ಕಂಬಗಳಿದ್ದರೂ ದೀಪಗಳು ಉರಿಯುತ್ತಿಲ್ಲ. ಇತ್ತೀಚೆಗೆ ಜನರು ವಾಯುವಿಹಾರಕ್ಕೆ ಬರುವುದನ್ನೇ ನಿಲ್ಲಿಸಿದ್ದಾರೆ ಎಂದು ದೂರಿದರು.</p>.<p>ಕೆರೆಯಲ್ಲಿ ಅಳವಡಿಸಿದ್ದ ತೆರೆದ ಜಿಮ್ ಹಾಗೂ ಮಕ್ಕಳ ಆಟದ ಉಪಕರಣಗಳು ಹಾಳಾಗಿವೆ. ಭದ್ರತಾ ಸಿಬ್ಬಂದಿಗೆ ಪ್ರತ್ಯೇಕ ಕೊಠಡಿ ಇಲ್ಲ. ಸಿಸಿಟಿವಿ ಕ್ಯಾಮೆರಾ ಕಾರ್ಯನಿರ್ವಹಿಸುತ್ತಿಲ್ಲ. ಶೌಚಾಲಯ ಇದ್ದರೂ ನೀರಿನ ಸೌಲಭ್ಯ ಸಮರ್ಪಕವಾಗಿಲ್ಲ ಎಂದು ಸ್ಥಳೀಯ ನಿವಾಸಿ ಸಿದ್ದಪ್ಪ ದೂರಿದರು.</p>.<p>ಸಂಬಂದಪಟ್ಟ ಅಧಿಕಾರಿಗಳು ಕೂಡಲೇ ಕೆರೆಯನ್ನು ಶುದ್ಧಗೊಳಿಸಿ, ಕೊಳಚೆನೀರು ಸೇರದಂತೆ ತಡೆಗಟ್ಟಬೇಕು. ಅವ್ಯವಸ್ಥೆಗಳನ್ನು ಸರಿಪಡಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p> <strong>ಸಂಬಂಧಪಟ್ಟವರಿಗೆ ಶೀಘ್ರವೇ ನೋಟಿಸ್</strong></p><p> ಹೆಗಡೆನಗರ ಮುಖ್ಯರಸ್ತೆಯ ಹಜ್ ಭವನದ ಮುಂಭಾಗದ ಪಾದಚಾರಿ ಮಾರ್ಗದಲ್ಲಿ ಚೇಂಬರ್ ಕಟ್ಟಿಕೊಂಡಿತ್ತು. ಈಗಾಗಲೆ ಅದನ್ನು ದುರಸ್ತಿಗೊಳಿಸಿ ಒಳಚರಂಡಿಗೆ ಸಂಪರ್ಕ ಕಲ್ಪಿಸಿ ರಾಜಕಾಲುವೆ ಮೂಲಕ ಕೆರೆಗೆ ಸೇರುತ್ತಿದ್ದ ಕೊಳಚೆನೀರನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದೆ. ಅಪಾರ್ಟ್ಮೆಂಟ್ಗಳಿಂದ ಕೊಳಚೆನೀರು ಹರಿದುಬರುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧಿಸಿದವರಿಗೆ ತಕ್ಷಣ ನೋಟಿಸ್ ನೀಡಿ ಅಗತ್ಯಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಜಲಮಂಡಳಿ ಉತ್ತರ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ ಹೊಸಮನಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಬ್ಯಾಟರಾಯನಪುರ ಕ್ಷೇತ್ರದ ಸಂಪಿಗೇಹಳ್ಳಿ ವಾರ್ಡ್ ವ್ಯಾಪ್ತಿಯ ತಿರುಮೇನಹಳ್ಳಿ ಕೆರೆಗೆ ಸುತ್ತಮುತ್ತಲ ಅಪಾರ್ಟ್ಮೆಂಟ್ಗಳು ಹಾಗೂ ವಿಲ್ಲಾಗಳಿಂದ ಹರಿದುಬರುವ ಕೊಳಚೆ ನೀರು ಸೇರುತ್ತಿದೆ. ಇದರಿಂದ ಕೆರೆಯ ನೀರು ಕಲುಷಿತಗೊಂಡಿದೆ.</p>.<p>20 ಎಕರೆ ವಿಸ್ತೀರ್ಣದ ಕೆರೆಯನ್ನು ಲಕ್ಷಾಂತರ ರೂಪಾಯಿ ಖರ್ಚುಮಾಡಿ, ತಂತಿಬೇಲಿ, ಕಲ್ಲಿನ ಹೊದಿಕೆ, ನಡಿಗೆಪಥ ಹಾಗೂ ವಿಶ್ರಾಂತಿಗಾಗಿ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಮೂರು ಚಿಕ್ಕ ನಡುಗಡ್ಡೆಗಳು, ಸುತ್ತಲೂ ಹಸಿರು ವಾತಾವರಣ, ತೆರೆದ ಜಿಮ್ ಹಾಗೂ ಮಕ್ಕಳ ಆಟದ ಸಾಮಗ್ರಿಗಳನ್ನು ಅಳವಡಿಸಲಾಗಿದೆ. ಕೆರೆಯ ಪಕ್ಕದಲ್ಲೇ ಹೊಸದಾಗಿ ರಾಜಕಾಲುವೆಯನ್ನೂ ನಿರ್ಮಿಸಲಾಗಿದೆ. ಆದರೆ ಸುತ್ತಮುತ್ತಲಿನ ಅಪಾರ್ಟ್ಮೆಂಟ್ಗಳು ಮತ್ತು ವಿಲ್ಲಾಗಳಿಂದ ಕೊಳಚೆನೀರು ನೇರವಾಗಿ ಕೆರೆಗೆ ಸೇರುತ್ತಿರುವುದು ಪರಿಸರ ಹಾನಿಗೆ ಕಾರಣವಾಗಿದೆ. ಇದನ್ನು ತಡೆಗಟ್ಟಬೇಕೆಂದು ಬೆಂಗಳೂರು ಜಲಮಂಡಳಿ ಮತ್ತು ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>ಅಗ್ರಹಾರ ಬಡಾವಣೆಯ ಸುತ್ತಮುತ್ತಲ ಅಪಾರ್ಟ್ಮೆಂಟ್ಗಳು ಹಾಗೂ ಹೆಗಡೆನಗರ ಮುಖ್ಯರಸ್ತೆಯ ಹಜ್ ಭವನದ ಕಡೆಯಿಂದ ರಾಜಕಾಲುವೆ ಮೂಲಕ ಹರಿದುಬರುವ ಕೊಳಚೆನೀರು ನೇರವಾಗಿ ಕೆರೆಗೆ ಸೇರುತ್ತಿದೆ. ಕೆರೆಯ ಪಕ್ಕದಲ್ಲೇ ತಿರುಮೇನಹಳ್ಳಿ-ಅಗ್ರಹಾರ ಬಡಾವಣೆ ಮುಖ್ಯರಸ್ತೆಯು ಹಾದುಹೋಗಿದೆ. ಈ ಮಾರ್ಗದಲ್ಲಿ ಪ್ರತಿದಿನ ಸಂಚರಿಸುವ ಸಾವಿರಾರು ವಾಹನ ಸವಾರರು, ಪಾದಚಾರಿಗಳು ಮತ್ತು ವಾಯುವಿಹಾರಿಗಳು ಕಿರಿಕಿರಿ ಅನುಭವಿಸುವಂತಾಗಿದೆ ಎಂದು ಅಗ್ರಹಾರ ಬಡಾವಣೆ ನಿವಾಸಿ ಎನ್.ನರಸಿಂಹಮೂರ್ತಿ ದೂರಿದರು.</p>.<p>ಈ ಹಿಂದೆ ಕೆರೆಯಲ್ಲಿ ನೆಲೆಸಿದ್ದ ವಿವಿಧ ಪಕ್ಷಿಗಳು, ಈಗ ಬೇರೆಡೆಗೆ ವಲಸೆ ಹೋಗಿವೆ. ವಿಷಕಾರಿ ನೀರಿನ ಪರಿಣಾಮ, ಮೀನುಗಳು ನಿರಂತರವಾಗಿ ಸಾಯುತ್ತಿವೆ. ಅಲ್ಲದೆ ಕೆರೆಯ ಸುತ್ತಲಿನ ಪ್ರದೇಶಗಳ ಕೊಳವೆಬಾವಿಗಳಲ್ಲೂ ಅಂತರ್ಜಲ ಕಲುಷಿತಗೊಂಡು ಕುಡಿಯಲು ಯೋಗ್ಯವಿಲ್ಲದಂತಾಗಿದೆ. ಕೆರೆಯ ಸಮೀಪದಲ್ಲೇ ವಾಸದ ಮನೆಗಳಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕೆರೆ ಸುತ್ತ ವಿದ್ಯುತ್ ಕಂಬಗಳಿದ್ದರೂ ದೀಪಗಳು ಉರಿಯುತ್ತಿಲ್ಲ. ಇತ್ತೀಚೆಗೆ ಜನರು ವಾಯುವಿಹಾರಕ್ಕೆ ಬರುವುದನ್ನೇ ನಿಲ್ಲಿಸಿದ್ದಾರೆ ಎಂದು ದೂರಿದರು.</p>.<p>ಕೆರೆಯಲ್ಲಿ ಅಳವಡಿಸಿದ್ದ ತೆರೆದ ಜಿಮ್ ಹಾಗೂ ಮಕ್ಕಳ ಆಟದ ಉಪಕರಣಗಳು ಹಾಳಾಗಿವೆ. ಭದ್ರತಾ ಸಿಬ್ಬಂದಿಗೆ ಪ್ರತ್ಯೇಕ ಕೊಠಡಿ ಇಲ್ಲ. ಸಿಸಿಟಿವಿ ಕ್ಯಾಮೆರಾ ಕಾರ್ಯನಿರ್ವಹಿಸುತ್ತಿಲ್ಲ. ಶೌಚಾಲಯ ಇದ್ದರೂ ನೀರಿನ ಸೌಲಭ್ಯ ಸಮರ್ಪಕವಾಗಿಲ್ಲ ಎಂದು ಸ್ಥಳೀಯ ನಿವಾಸಿ ಸಿದ್ದಪ್ಪ ದೂರಿದರು.</p>.<p>ಸಂಬಂದಪಟ್ಟ ಅಧಿಕಾರಿಗಳು ಕೂಡಲೇ ಕೆರೆಯನ್ನು ಶುದ್ಧಗೊಳಿಸಿ, ಕೊಳಚೆನೀರು ಸೇರದಂತೆ ತಡೆಗಟ್ಟಬೇಕು. ಅವ್ಯವಸ್ಥೆಗಳನ್ನು ಸರಿಪಡಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p> <strong>ಸಂಬಂಧಪಟ್ಟವರಿಗೆ ಶೀಘ್ರವೇ ನೋಟಿಸ್</strong></p><p> ಹೆಗಡೆನಗರ ಮುಖ್ಯರಸ್ತೆಯ ಹಜ್ ಭವನದ ಮುಂಭಾಗದ ಪಾದಚಾರಿ ಮಾರ್ಗದಲ್ಲಿ ಚೇಂಬರ್ ಕಟ್ಟಿಕೊಂಡಿತ್ತು. ಈಗಾಗಲೆ ಅದನ್ನು ದುರಸ್ತಿಗೊಳಿಸಿ ಒಳಚರಂಡಿಗೆ ಸಂಪರ್ಕ ಕಲ್ಪಿಸಿ ರಾಜಕಾಲುವೆ ಮೂಲಕ ಕೆರೆಗೆ ಸೇರುತ್ತಿದ್ದ ಕೊಳಚೆನೀರನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದೆ. ಅಪಾರ್ಟ್ಮೆಂಟ್ಗಳಿಂದ ಕೊಳಚೆನೀರು ಹರಿದುಬರುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧಿಸಿದವರಿಗೆ ತಕ್ಷಣ ನೋಟಿಸ್ ನೀಡಿ ಅಗತ್ಯಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಜಲಮಂಡಳಿ ಉತ್ತರ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ ಹೊಸಮನಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>