<p><strong>ಬೆಂಗಳೂರು</strong>: ಚಾಂಪಿಯನ್ಗಳಿಗೆ ಇದೊಂದು ‘ಡೆಡ್ಲಿ ವೆಲ್ಕಮ್’ ಎಂದು ಮಾಜಿ ಕ್ರಿಕೆಟರ್ ಸೈಯದ್ ಕಿರ್ಮಾನಿ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.</p><p>ಇಂತಹದ್ದೆಲ್ಲ ಆಗುತ್ತೆ ಎನ್ನುವುದನ್ನು ನೋಡಿದರೆ ನಮ್ಮ ಕಾಲದಲ್ಲಿ ಆಗ ಯಾವುದೇ ಟಿ.ವಿ ಮಾಧ್ಯಮಗಳ ಚೀತ್ಕಾರಗಳಿರಲಿಲ್ಲ, ಸಮೂಹ ಸನ್ನಿಗಳಿರಲಿಲ್ಲ. ಅದಕ್ಕೆ ಇಂತಹ ಘಟನೆಗಳು ನಡೆಯುತ್ತಿರಲಿಲ್ಲ ಎಂದು ಪರೋಕ್ಷವಾಗಿ ಮಾಧ್ಯಮಗಳ ವಿರುದ್ಧ ಹರಿಹಾಯ್ದಿದ್ದಾರೆ.</p><p>ಸಾಕಷ್ಟು ಮುಂಜಾಗ್ರತೆ ವಹಿಸಿದ್ದರೆ ಭಾರಿ ದುರ್ಘಟನೆಯನ್ನು ತಡೆಯಬಹುದಿತ್ತು. ಸಮಯ ಹೊಂದಾಣಿಕೆ ಮಾಡಿಕೊಂಡು ಕಾರ್ಯಕ್ರಮ ಆಯೋಜನೆ ಮಾಡಿದ್ದರೆ ಅಮಾಯಕರ ಜೀವ ಉಳಿಯುತ್ತಿದ್ದವು ಎಂದು ಹೇಳಿದ್ದಾರೆ.</p>.<p>ಒಂದು ಕಪ್ ಪಡೆಯಲು 18 ವರ್ಷ ಕಾದರು. ಆದರೆ, ಹರ್ಷೋತ್ಸವ ಮಾಡಲು ಇನ್ನೊಂದೆರಡು ದಿನ ಕಾಯಬಹುದಿತ್ತು. ವ್ಯವಸ್ಥಿತ ಕಾರ್ಯಕ್ರಮ ಆಯೋಜಿಸಿ ಆರ್ಸಿಬಿ ಹಿರೋಗಳನ್ನು ಸ್ವಾಗತಿಸಬಹುದಿತ್ತು ಎಂದು ಹೇಳಿದ್ದಾರೆ.</p><p>ಆರ್ಸಿಬಿ ಅಭಿಮಾನಿಗಳ ಅಭಿಮಾನ ಹುಚ್ಚುತನಕ್ಕೆ ತಿರುಗಿರುವುದು ಸ್ಪಷ್ಟವಾಗಿದೆ. ಆರ್ಸಿಬಿ ಕಪ್ ಗೆದ್ದಾಗ ಬಂದಿರುವ ಅಭಿಮಾನಿಗಳು ಕರ್ನಾಟಕ ತಂಡ ರಣಜಿ ಟ್ರೋಫಿ ಗೆದ್ದಾಗ ಬರುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.</p><p>ನಮ್ಮ ಕಾಲದಲ್ಲಿ ಕ್ರಿಕೆಟ್ನ ಹುಚ್ಚು ಅಭಿಮಾನಿಗಳನ್ನು ನೋಡಲು ಸಾಧ್ಯವಿರಲಿಲ್ಲ. ಅದೂ ಸಹ ಇಂದಿನ ಐಪಿಎಲ್ ಅಭಿಮಾನಿಗಳ ಹುಚ್ಚು ವಿಪರೀತ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p><p>ರಣಜಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದ ಸೈಯದ್ ಕಿರ್ಮಾನಿ ಅವರು 1983ರಲ್ಲಿ ಭಾರತ ವಿಶ್ವಕಪ್ ಗೆದ್ದಾಗ ತಂಡದ ಸದಸ್ಯರಾಗಿದ್ದರು.</p>.Podcast| RCB ತಂಡಕ್ಕೆ ಸನ್ಮಾನ: ಕಾಲ್ತುಳಿತದ ಸಂಪೂರ್ಣ ಹೊಣೆ ಸರ್ಕಾರ ಹೊರಬೇಕು.Video | ಸೂತಕವಾಗಿ ಬದಲಾದ RCB ಸಂಭ್ರಮಾಚರಣೆ-ಕಾಲ್ತುಳಿತ: 11 ಅಭಿಮಾನಿಗಳ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಚಾಂಪಿಯನ್ಗಳಿಗೆ ಇದೊಂದು ‘ಡೆಡ್ಲಿ ವೆಲ್ಕಮ್’ ಎಂದು ಮಾಜಿ ಕ್ರಿಕೆಟರ್ ಸೈಯದ್ ಕಿರ್ಮಾನಿ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.</p><p>ಇಂತಹದ್ದೆಲ್ಲ ಆಗುತ್ತೆ ಎನ್ನುವುದನ್ನು ನೋಡಿದರೆ ನಮ್ಮ ಕಾಲದಲ್ಲಿ ಆಗ ಯಾವುದೇ ಟಿ.ವಿ ಮಾಧ್ಯಮಗಳ ಚೀತ್ಕಾರಗಳಿರಲಿಲ್ಲ, ಸಮೂಹ ಸನ್ನಿಗಳಿರಲಿಲ್ಲ. ಅದಕ್ಕೆ ಇಂತಹ ಘಟನೆಗಳು ನಡೆಯುತ್ತಿರಲಿಲ್ಲ ಎಂದು ಪರೋಕ್ಷವಾಗಿ ಮಾಧ್ಯಮಗಳ ವಿರುದ್ಧ ಹರಿಹಾಯ್ದಿದ್ದಾರೆ.</p><p>ಸಾಕಷ್ಟು ಮುಂಜಾಗ್ರತೆ ವಹಿಸಿದ್ದರೆ ಭಾರಿ ದುರ್ಘಟನೆಯನ್ನು ತಡೆಯಬಹುದಿತ್ತು. ಸಮಯ ಹೊಂದಾಣಿಕೆ ಮಾಡಿಕೊಂಡು ಕಾರ್ಯಕ್ರಮ ಆಯೋಜನೆ ಮಾಡಿದ್ದರೆ ಅಮಾಯಕರ ಜೀವ ಉಳಿಯುತ್ತಿದ್ದವು ಎಂದು ಹೇಳಿದ್ದಾರೆ.</p>.<p>ಒಂದು ಕಪ್ ಪಡೆಯಲು 18 ವರ್ಷ ಕಾದರು. ಆದರೆ, ಹರ್ಷೋತ್ಸವ ಮಾಡಲು ಇನ್ನೊಂದೆರಡು ದಿನ ಕಾಯಬಹುದಿತ್ತು. ವ್ಯವಸ್ಥಿತ ಕಾರ್ಯಕ್ರಮ ಆಯೋಜಿಸಿ ಆರ್ಸಿಬಿ ಹಿರೋಗಳನ್ನು ಸ್ವಾಗತಿಸಬಹುದಿತ್ತು ಎಂದು ಹೇಳಿದ್ದಾರೆ.</p><p>ಆರ್ಸಿಬಿ ಅಭಿಮಾನಿಗಳ ಅಭಿಮಾನ ಹುಚ್ಚುತನಕ್ಕೆ ತಿರುಗಿರುವುದು ಸ್ಪಷ್ಟವಾಗಿದೆ. ಆರ್ಸಿಬಿ ಕಪ್ ಗೆದ್ದಾಗ ಬಂದಿರುವ ಅಭಿಮಾನಿಗಳು ಕರ್ನಾಟಕ ತಂಡ ರಣಜಿ ಟ್ರೋಫಿ ಗೆದ್ದಾಗ ಬರುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.</p><p>ನಮ್ಮ ಕಾಲದಲ್ಲಿ ಕ್ರಿಕೆಟ್ನ ಹುಚ್ಚು ಅಭಿಮಾನಿಗಳನ್ನು ನೋಡಲು ಸಾಧ್ಯವಿರಲಿಲ್ಲ. ಅದೂ ಸಹ ಇಂದಿನ ಐಪಿಎಲ್ ಅಭಿಮಾನಿಗಳ ಹುಚ್ಚು ವಿಪರೀತ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p><p>ರಣಜಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದ ಸೈಯದ್ ಕಿರ್ಮಾನಿ ಅವರು 1983ರಲ್ಲಿ ಭಾರತ ವಿಶ್ವಕಪ್ ಗೆದ್ದಾಗ ತಂಡದ ಸದಸ್ಯರಾಗಿದ್ದರು.</p>.Podcast| RCB ತಂಡಕ್ಕೆ ಸನ್ಮಾನ: ಕಾಲ್ತುಳಿತದ ಸಂಪೂರ್ಣ ಹೊಣೆ ಸರ್ಕಾರ ಹೊರಬೇಕು.Video | ಸೂತಕವಾಗಿ ಬದಲಾದ RCB ಸಂಭ್ರಮಾಚರಣೆ-ಕಾಲ್ತುಳಿತ: 11 ಅಭಿಮಾನಿಗಳ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>