ಇಂತಹ ಪ್ರಕರಣಗಳು ಮರುಕಳಿಸುತ್ತಿದ್ದರೂ ಬಿಡಿಎ ಅಧಿಕಾರಿಗಳಾಗಲಿ, ಪಾಲಿಕೆ ಅಧಿಕಾರಿಗಳಾಗಲಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿಲ್ಲ. ಕೆರೆ ಅಭಿವೃದ್ದಿಗಾಗಿ ಕೋಟ್ಯಂತರ ಮೊತ್ತ ಮೀಸಲಿಡಲಾಗಿದೆ. ಆದರೂ ಸ್ವಚ್ಛತೆ ಮರೀಚಿಕೆಯಾಗಿದೆ. ಕೆರೆ ನಿರ್ವಹಣೆ ಸಮರ್ಪಕವಾಗಿಲ್ಲ. ಕೆರೆಗೆ ಸಿಸಿ ಟಿವಿ ಕ್ಯಾಮೆರಾಗಳು ಅಳವಡಿಸಿಲ್ಲ ಎಂದು ವರ್ತೂರು ನಿವಾಸಿ ಮುನಿರಾಜ್ ದೂರಿದರು.