ಪರಿಸರ ಕಾರ್ಯಕರ್ತ ದತ್ತಾತ್ರೇಯ ದೇವರೆ, ‘ಸರ್ಕಾರ ಕೋವಿಡ್ ಕರ್ಫ್ಯೂ ಜಾರಿ ಮಾಡಿದೆ. ಈ ಸಂದರ್ಭದಲ್ಲಿ ಮರಗಳ ತೆರವಿಗೆ ಅನುಮತಿ ನೀಡಿ, ಆಕ್ಷೇಪಣೆ ಸಲ್ಲಿಸಲು ಕೇವಲ 10 ದಿನಗಳ ಕಾಲಾವಕಾಶ ನೀಡಲಾಗಿದೆ. ಕರ್ಫ್ಯೂ, ಲಾಕ್ಡೌನ್ನಂತಹ ನಿರ್ಬಂಧಗಳು ಮುಗಿದ ನಂತರ ಈ ಎಲ್ಲ ಪ್ರಕ್ರಿಯೆ ನಡೆಸಬೇಕು. ಆಕ್ಷೇಪಣೆ ಸಲ್ಲಿಸುವ ಕಾಲಾವಕಾಶವನ್ನು ವಿಸ್ತರಿಸಬೇಕು’ ಎಂದು ಒತ್ತಾಯಿಸಿದರು.