‘ಯಲಹಂಕದ ಚೊಕ್ಕನಹಳ್ಳಿಯಲ್ಲಿರುವ ಆಸ್ತಿ ಯೊಂದರ ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ತಮ್ಮ ಕಕ್ಷಿದಾರರ ಪರವಾಗಿ ಹುಸೇನ್ ಅವರು ನ್ಯಾಯಾಲಯ ದಲ್ಲಿ ಮೊಕದ್ದಮೆ ಹೂಡಿದ್ದು, ವಿಚಾರಣೆ ನಡೆಯುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೆ. 9 ರಂದು ಹುಸೇನ್ ಅವರಿಗೆ ಕರೆ ಮಾಡಿದ್ದ ವ್ಯಕ್ತಿ, ‘ನಾನು ಶಾಸಕ ಜಮೀರ್ ಅಹ್ಮದ್ ಖಾನ್ ಕಡೆಯವನು. ವ್ಯಾಜ್ಯದ ಮೊಕದ್ದಮೆ ಹಿಂಪಡೆಯಬೇಕು. ಇಲ್ಲದಿದ್ದರೆ, ನಿನ್ನನ್ನು ಹಾಗೂ ನಿನ್ನ ಕುಟುಂಬದವರನ್ನು ಸುಮ್ಮನೇ ಬಿಡುವುದಿಲ್ಲ’ ಎಂದು ಬೆದರಿಸಿದ್ದ.'