‘ಎಟಿಎಂಗಳಿಗೆ ಹಣ ಹಾಕುವ ಸೆಕ್ಯೂರಿಟಿ ವ್ಯಾಲ್ಯೂ ಇಂಡಿಯಾ ಏಜೆನ್ಸಿಯಲ್ಲಿ ಆರೋಪಿ ಮುರುಳಿ ಕೆಲಸ ಮಾಡುತ್ತಿದ್ದ. 2022ರಲ್ಲಿ ಕೆಲಸ ಬಿಟ್ಟಿದ್ದ. ಅದೇ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ ಎರಿಕಾಲಾ ವೆಂಕಟೇಶ ಹಾಗೂ ಮುರಳಿ ಒಂದೇ ಊರಿನವರು. ಇತ್ತ ಕೆಲಸ ಬಿಟ್ಟು ಊರಿಗೆ ಹೋಗಿದ್ದ ಮುರುಳಿ ಸಾಲ ಮಾಡಿಕೊಂಡಿದ್ದ. ಸಾಲ ಮಾಡಿದ್ದ ವಿಚಾರವನ್ನು ವೆಂಕಟೇಶ್ಗೆ ಮುರಳಿ ತಿಳಿಸಿದ್ದ. ನಂತರ, ಎಟಿಎಂನಿಂದ ಹಣ ಕಳವು ಮಾಡಲು ಯೋಜನೆ ರೂಪಿಸಿದ್ದರು’ ಎಂದು ಪೊಲೀಸರು ಹೇಳಿದರು.