<p><strong>ಬೆಂಗಳೂರು</strong>: ಸ್ನೇಹಿತನನ್ನೇ ಅಪಹರಿಸಿ ಸುಲಿಗೆ ಮಾಡಿದ್ದ ಪ್ರಕರಣದಲ್ಲಿ ಬಾಲಕ ಸೇರಿ ಮೂವರು ಆರೋಪಿಗಳನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p><p>ಎಚ್.ಹೊಸಹಳ್ಳಿ ನಿವಾಸಿಗಳಾದ ಖಾಜ (19) ಮತ್ತು ಜಾನ್ ಪೀಟರ್ (20) ಹಾಗೂ ಬಾಲಕನನ್ನು ಬಂಧಿಸಲಾಗಿದೆ.</p><p>‘ಗೂಡ್ಸ್ ವಾಹನ ಚಾಲಕ ಬಸವರಾಜ್ ಅವರನ್ನು ಆರೋಪಿಗಳು ಅಪಹರಿಸಿ, ಹಣ ಸುಲಿಗೆ ಮಾಡಿದ್ದರು. ಕ್ಯಾಬ್ ಖರೀದಿಸುವ ಸಲುವಾಗಿ ಗೂಡ್ಸ್ ವಾಹನ ಮಾರಾಟ ಮಾಡಿದ್ದರು. ಅದರಿಂದ ಬಂದ ಹಣವನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು. ಈ ವಿಷಯ ತಿಳಿದ ಬಸವರಾಜ್ ಸ್ನೇಹಿತ ಖಾಜ ಮತ್ತೊಬ್ಬರೊಂದಿಗೆ ಸೇರಿ ಜನವರಿ 30ರಂದು ಸಂಜೆ 7 ಗಂಟೆ ಸುಮಾರಿಗೆ ಬಸವರಾಜ್ ಅವರಿಗೆ ಕರೆ ಮಾಡಿ ಮನೆಯಿಂದ ಕರೆಸಿಕೊಂಡು ಬಳಿಕ ಆಟೊದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದುರು’ ಎಂದು ಪೊಲೀಸರು ತಿಳಿಸಿದರು.</p><p>ಇದಾದ ನಂತರ ಅವರನ್ನು ಥಳಿಸಿ, ₹1,500 ನಗದು ಕಸಿದುಕೊಂಡಿದ್ದರು. ಅಲ್ಲದೇ ₹50 ಸಾವಿರ ಹಣವನ್ನು ತರಿಸಿಕೊಡುವಂತೆ ಧಮ್ಕಿ ಹಾಕಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಬಸವರಾಜ್ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸ್ನೇಹಿತನನ್ನೇ ಅಪಹರಿಸಿ ಸುಲಿಗೆ ಮಾಡಿದ್ದ ಪ್ರಕರಣದಲ್ಲಿ ಬಾಲಕ ಸೇರಿ ಮೂವರು ಆರೋಪಿಗಳನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p><p>ಎಚ್.ಹೊಸಹಳ್ಳಿ ನಿವಾಸಿಗಳಾದ ಖಾಜ (19) ಮತ್ತು ಜಾನ್ ಪೀಟರ್ (20) ಹಾಗೂ ಬಾಲಕನನ್ನು ಬಂಧಿಸಲಾಗಿದೆ.</p><p>‘ಗೂಡ್ಸ್ ವಾಹನ ಚಾಲಕ ಬಸವರಾಜ್ ಅವರನ್ನು ಆರೋಪಿಗಳು ಅಪಹರಿಸಿ, ಹಣ ಸುಲಿಗೆ ಮಾಡಿದ್ದರು. ಕ್ಯಾಬ್ ಖರೀದಿಸುವ ಸಲುವಾಗಿ ಗೂಡ್ಸ್ ವಾಹನ ಮಾರಾಟ ಮಾಡಿದ್ದರು. ಅದರಿಂದ ಬಂದ ಹಣವನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು. ಈ ವಿಷಯ ತಿಳಿದ ಬಸವರಾಜ್ ಸ್ನೇಹಿತ ಖಾಜ ಮತ್ತೊಬ್ಬರೊಂದಿಗೆ ಸೇರಿ ಜನವರಿ 30ರಂದು ಸಂಜೆ 7 ಗಂಟೆ ಸುಮಾರಿಗೆ ಬಸವರಾಜ್ ಅವರಿಗೆ ಕರೆ ಮಾಡಿ ಮನೆಯಿಂದ ಕರೆಸಿಕೊಂಡು ಬಳಿಕ ಆಟೊದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದುರು’ ಎಂದು ಪೊಲೀಸರು ತಿಳಿಸಿದರು.</p><p>ಇದಾದ ನಂತರ ಅವರನ್ನು ಥಳಿಸಿ, ₹1,500 ನಗದು ಕಸಿದುಕೊಂಡಿದ್ದರು. ಅಲ್ಲದೇ ₹50 ಸಾವಿರ ಹಣವನ್ನು ತರಿಸಿಕೊಡುವಂತೆ ಧಮ್ಕಿ ಹಾಕಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಬಸವರಾಜ್ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>