ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರಿಬಿದನೂರು: ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಬಾಲಕರು ಸಾವು

Last Updated 1 ಮೇ 2022, 18:37 IST
ಅಕ್ಷರ ಗಾತ್ರ

ಗೌರಿಬಿದನೂರು:ತಾಲ್ಲೂಕಿನ‌ ಹೊಸೂರು ಹೋಬಳಿಯ ಹಂಪಸಂದ್ರದಲ್ಲಿಭಾನುವಾರಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರಿನಲ್ಲಿ ‌ಮುಳುಗಿ ಸಾವನ್ನಪ್ಪಿದ್ದಾರೆ.

ಹಂಪಸಂದ್ರ ಗ್ರಾಮದ ಲಿಖಿತ್ (16), ರಾಜೇಶ್ (16) ಹಾಗೂ ಬೆಂಗಳೂರಿನ ಮನೋಜ್ (15) ಎಂದು ಮೃತಪಟ್ಟವರು.ಬೇಸಿಗೆ ರಜೆಗೆ ಅಜ್ಜಿ ಮನೆಗೆ ಬಂದಿದ್ದಬೆಂಗಳೂರಿನ ಮನೋಜ್, ಅಕ್ಕಪಕ್ಕದ ಮನೆಯ ಆರು ಸ್ನೇಹಿತರೊಂದಿಗೆ ಈಜಲು ತೆರಳಿದ್ದ. ಏಳು ಬಾಲಕರು ಕೃಷಿ ಹೊಂಡದಲ್ಲಿ ಮುಳುಗಿದ್ದರು. ಆ ಪೈಕಿ ನಾಲ್ವರು ಈಜಿ ದಡ ಸೇರಿ ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ್ದಾರೆ.

ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕೃಷಿ ಹೊಂಡ ಒಡೆದು ಮೃತದೇಹ ಹೊರತೆಗೆದಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT