<p><strong>ಬೆಂಗಳೂರು</strong>: ನಗರದ ಸಾಫ್ಟ್ವೇರ್ ಉದ್ಯೋಗಿಯೊಬ್ಬರಿಗೆ ‘ಡಿಜಿಟಲ್ ಅರೆಸ್ಟ್‘ ಮೂಲಕ ಬೆದರಿಸಿ ₹11.83 ಕೋಟಿ ವಸೂಲಿ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಈಶಾನ್ಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಸೂರತ್ ನಿವಾಸಿಗಳಾದ ಕರಣ್, ತರುಣ್ ನಟಾನಿ ಹಾಗೂ ಧವಲ್ ಶಾ ಬಂಧಿತರು.</p>.<p>ಆರೋಪಿಗಳು ನಗರದ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಎಂಜಿನಿಯರ್ ವಿಜಯಕುಮಾರ್ ಅವರಿಗೆ ಒಂದು ತಿಂಗಳು ಪೀಡಿಸಿ ವಿವಿಧ ಖಾತೆಗಳಿಗೆ ಹಣವನ್ನು ವರ್ಗಾಯಿಸಿಕೊಂಡಿದ್ದರು.</p>.<p>‘ವಿಜಯಕುಮಾರ್ ಅವರ ಕಂಪನಿಯು ತನ್ನ ₹50 ಲಕ್ಷ ಮೌಲ್ಯದ ಒಂದು ಷೇರನ್ನು ಆತನಿಗೆ ನೀಡಿತ್ತು. ಆ ಷೇರಿನ ಪ್ರಸ್ತುತ ಮೌಲ್ಯ ₹12 ಕೋಟಿ ಇರುವುದನ್ನು ತಿಳಿದುಕೊಂಡಿದ್ದ ಆರೋಪಿಗಳು, ಪ್ರತ್ಯೇಕ ನಂಬರ್ಗಳಿಂದ ಅವರಿಗೆ ಕರೆ ಮಾಡಿ ತಾವು ಇ.ಡಿ, ಕಸ್ಟಮ್ಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡಿದ್ದರು’ ಎಂದು ದೂರಿನಲ್ಲಿ ತಿಳಿಸಲಾಗಿತ್ತು.</p>.<p>‘ನಿಮ್ಮ ಖಾತೆಯಲ್ಲಿ ಅಕ್ರಮವಾಗಿ ಹಣದ ವಹಿವಾಟು ನಡೆದಿರುವ ಕಾರಣ ತನಿಖೆಗಾಗಿ ಕೆವೈಸಿ ದಾಖಲೆಗಳನ್ನು ನೀಡಬೇಕೆಂದು ಟೆಕಿಯಿಂದ ಪಡೆದುಕೊಂಡಿದ್ದರು. ಬಳಿಕ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ನೆರವಾಗುತ್ತೇವೆ ಎಂದು ನಂಬಿಸಿ, ಒಟ್ಟು ಒಂಬತ್ತು ಖಾತೆಗಳಿಗೆ ಹಣ ವರ್ಗಾಯಿಸಿಕೊಂಡಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>ಹಣ ವರ್ಗಾವಣೆಯಾದ ಖಾತೆಗಳ ಜಾಡು ಹಿಡಿದು ಪೊಲೀಸರು ತನಿಖೆ ನಡೆಸಿದಾಗ ಸೂರತ್ನ ಚಿನ್ನದ ವ್ಯಾಪಾರಿಯೊಬ್ಬರ ಖಾತೆಗೆ ₹7.5 ಕೋಟಿ ವರ್ಗಾವಣೆಯಾಗಿರುವುದು ಗೊತ್ತಾಯಿತು. ಸೂರತ್ಗೆ ತೆರಳಿದ ಪೊಲೀಸರು ಚಿನ್ನದ ವ್ಯಾಪಾರಿಯ ಬಳಿ ತೆರಳಿ ಮಾಹಿತಿ ಸಂಗ್ರಹಿಸಿದಾಗ, ಆರೋಪಿಗಳು ವಂಚನೆಯ ಹಣದಲ್ಲಿ ಚಿನ್ನಾಭರಣ ಖರೀದಿಸಿದ್ದರು ಎಂಬುದು ಪತ್ತೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಸಾಫ್ಟ್ವೇರ್ ಉದ್ಯೋಗಿಯೊಬ್ಬರಿಗೆ ‘ಡಿಜಿಟಲ್ ಅರೆಸ್ಟ್‘ ಮೂಲಕ ಬೆದರಿಸಿ ₹11.83 ಕೋಟಿ ವಸೂಲಿ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಈಶಾನ್ಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಸೂರತ್ ನಿವಾಸಿಗಳಾದ ಕರಣ್, ತರುಣ್ ನಟಾನಿ ಹಾಗೂ ಧವಲ್ ಶಾ ಬಂಧಿತರು.</p>.<p>ಆರೋಪಿಗಳು ನಗರದ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್ವೇರ್ ಎಂಜಿನಿಯರ್ ವಿಜಯಕುಮಾರ್ ಅವರಿಗೆ ಒಂದು ತಿಂಗಳು ಪೀಡಿಸಿ ವಿವಿಧ ಖಾತೆಗಳಿಗೆ ಹಣವನ್ನು ವರ್ಗಾಯಿಸಿಕೊಂಡಿದ್ದರು.</p>.<p>‘ವಿಜಯಕುಮಾರ್ ಅವರ ಕಂಪನಿಯು ತನ್ನ ₹50 ಲಕ್ಷ ಮೌಲ್ಯದ ಒಂದು ಷೇರನ್ನು ಆತನಿಗೆ ನೀಡಿತ್ತು. ಆ ಷೇರಿನ ಪ್ರಸ್ತುತ ಮೌಲ್ಯ ₹12 ಕೋಟಿ ಇರುವುದನ್ನು ತಿಳಿದುಕೊಂಡಿದ್ದ ಆರೋಪಿಗಳು, ಪ್ರತ್ಯೇಕ ನಂಬರ್ಗಳಿಂದ ಅವರಿಗೆ ಕರೆ ಮಾಡಿ ತಾವು ಇ.ಡಿ, ಕಸ್ಟಮ್ಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡಿದ್ದರು’ ಎಂದು ದೂರಿನಲ್ಲಿ ತಿಳಿಸಲಾಗಿತ್ತು.</p>.<p>‘ನಿಮ್ಮ ಖಾತೆಯಲ್ಲಿ ಅಕ್ರಮವಾಗಿ ಹಣದ ವಹಿವಾಟು ನಡೆದಿರುವ ಕಾರಣ ತನಿಖೆಗಾಗಿ ಕೆವೈಸಿ ದಾಖಲೆಗಳನ್ನು ನೀಡಬೇಕೆಂದು ಟೆಕಿಯಿಂದ ಪಡೆದುಕೊಂಡಿದ್ದರು. ಬಳಿಕ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ನೆರವಾಗುತ್ತೇವೆ ಎಂದು ನಂಬಿಸಿ, ಒಟ್ಟು ಒಂಬತ್ತು ಖಾತೆಗಳಿಗೆ ಹಣ ವರ್ಗಾಯಿಸಿಕೊಂಡಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>ಹಣ ವರ್ಗಾವಣೆಯಾದ ಖಾತೆಗಳ ಜಾಡು ಹಿಡಿದು ಪೊಲೀಸರು ತನಿಖೆ ನಡೆಸಿದಾಗ ಸೂರತ್ನ ಚಿನ್ನದ ವ್ಯಾಪಾರಿಯೊಬ್ಬರ ಖಾತೆಗೆ ₹7.5 ಕೋಟಿ ವರ್ಗಾವಣೆಯಾಗಿರುವುದು ಗೊತ್ತಾಯಿತು. ಸೂರತ್ಗೆ ತೆರಳಿದ ಪೊಲೀಸರು ಚಿನ್ನದ ವ್ಯಾಪಾರಿಯ ಬಳಿ ತೆರಳಿ ಮಾಹಿತಿ ಸಂಗ್ರಹಿಸಿದಾಗ, ಆರೋಪಿಗಳು ವಂಚನೆಯ ಹಣದಲ್ಲಿ ಚಿನ್ನಾಭರಣ ಖರೀದಿಸಿದ್ದರು ಎಂಬುದು ಪತ್ತೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>