ಕಮಿಷನ್ ಆಸೆಗೆ ಸಂಧಾನ: ‘ದೂರುದಾರ ಕೊಂಡಪ್ಪ, ರೈಸ್ ಪುಲ್ಲಿಂಗ್ ದಂಧೆಯಲ್ಲಿ ತೊಡಗಿದ್ದರೆಂಬ ಮಾಹಿತಿ ಇದೆ. ವ್ಯಕ್ತಿಯೊಬ್ಬರನ್ನು ವಂಚಿಸಿ ₹ 15 ಲಕ್ಷ ಪಡೆದಿದ್ದರು. ಹಣ ಕಳೆದುಕೊಂಡಿದ್ದ ವ್ಯಕ್ತಿ, ಠಾಣೆ ಮೆಟ್ಟಿಲೇರಿದ್ದರು. ಸಂಧಾನದ ಮೂಲಕ ಹಣ ವಾಪಸು ಕೊಡಿಸುವುದಾಗಿ ಪಿಎಸ್ಐ ರುಮಾನ್ ಪಾಷಾ ಹಾಗೂ ಸಿಬ್ಬಂದಿ ಹೇಳಿದ್ದರು. ಅದಕ್ಕಾಗಿ ಕಮಿಷನ್ ನೀಡುವಂತೆ ಬೇಡಿಕೆ ಇರಿಸಿದ್ದರು’ ಎಂದು ಮೂಲಗಳು ತಿಳಿಸಿವೆ.