ನಗರದಲ್ಲಿ ಬುಧವಾರ ನಡೆದ ‘ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಂದು ದಿನದ ಶೃಂಗ’ದಲ್ಲಿ ಮಾತನಾಡಿ, ‘ಇತ್ತೀಚೆಗೆ ಬಾಂಗ್ಲಾದೇಶದಿಂದ ವಲಸೆ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅವರಲ್ಲಿ ಬಹುತೇಕರು ಕಟ್ಟಡ ನಿರ್ಮಾಣ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ದಿನಕ್ಕೆ ಕೇವಲ ₹ 150ಗೆ ದುಡಿಯಲು ಸಿದ್ಧವಿರುವುದರಿಂದ ಬಿಲ್ಡರ್ಗಳು ಹಾಗೂ ಗುತ್ತಿಗೆದಾರರು ಅವರನ್ನೇ ಬಳಸಿಕೊಳ್ಳುತ್ತಿದ್ದಾರೆ. ಇಲ್ಲಿನ ಕಾರ್ಮಿಕರು ₹ 300ನಿಂದ ₹ 600 ವರೆಗೆ ಬೇಡಿಕೆ ಇಡುತ್ತಿದ್ದಾರೆ. ಇದರಿಂದಾಗಿ ಬಾಂಗ್ಲಾದ ಕಾರ್ಮಿಕರಿಗೆ ಬೇಡಿಕೆ ಹೆಚ್ಚಿದೆ. ಮಾನವ ಕಳ್ಳಸಾಗಣೆ ಹೆಚ್ಚಲು ಇದೇ ಪ್ರಮುಖ ಕಾರಣ’ ಎಂದು ಹೇಳಿದರು.