<p><strong>ಬೆಂಗಳೂರು</strong>: ಯಶವಂತಪುರ ರೈಲು ನಿಲ್ದಾಣದಲ್ಲಿ ರೈಲುಗಳ ದಟ್ಟಣೆ ಕಡಿಮೆ ಮಾಡಲು ಮೂರು ಜೋಡಿ ರೈಲುಗಳ ನಿಲುಗಡೆಯನ್ನು ಬೇರೆ ನಿಲ್ದಾಣಗಳಿಗೆ ಸ್ಥಳಾಂತರಿಸಲು ರೈಲ್ವೆ ಮಂಡಳಿ ಅನುಮತಿ ನೀಡಿದೆ.</p>.<p>ಯಶವಂತಪುರ ರೈಲು ನಿಲ್ದಾಣಕ್ಕೆ ಬರುತ್ತಿದ್ದ ಈ ರೈಲುಗಳು ಜೂನ್ 24ರಿಂದ ಬದಲಿ ಮಾರ್ಗದಲ್ಲಿ ಸಂಚರಿಸಲಿವೆ.</p>.<p>ದಾದರ್ – ತಿರುನೆಲ್ವೇಲಿ ಮತ್ತು ತಿರುನೆಲ್ವೇಲಿ–ದಾದರ್ ಎಕ್ಸ್ಪ್ರೆಸ್ ರೈಲು ಯಶವಂತಪುರ, ಬಾಣಸವಾಡಿ, ಹೊಸೂರು, ಧರ್ಮಪುರಿ– ಓಮಲೂರು ಮೂಲಕ ಸಂಚರಿಸುವ ಬದಲು ಚಿಕ್ಕಬಾಣಾವರ, ಯಶವಂತಪುರ ಬೈಪಾಸ್, ಲೊಟ್ಟೆಗೊಲ್ಲಹಳ್ಳಿ, ಬೈಯ್ಯಪ್ಪನಹಳ್ಳಿ ಮೂಲಕ ಚಲಿಸಲಿವೆ. ಚಿಕ್ಕಬಾಣಾವರ ಮತ್ತು ಬೈಯಪ್ಪನಹಳ್ಳಿ ಎಸ್ಎಂವಿಟಿಯಲ್ಲಿ ನಿಲುಗಡೆಯನ್ನು ಹೊಂದಿದೆ.</p>.<p>ದಾದರ್-ಪುದುಚೇರಿ ಮತ್ತು ಪುದುಚೇರಿ-ದಾದರ್ ಎಕ್ಸ್ಪ್ರೆಸ್ ರೈಲು ಯಶವಂತಪುರ, ಬಾಣಸವಾಡಿ, ಕೃಷ್ಣರಾಜಪುರ, ಬಂಗಾರಪೇಟೆ, ಜೋಲಾರಪೇಟೆ ಮೂಲಕ ಸಂಚರಿಸುತ್ತಿರುವುದನ್ನು ಕೈಬಿಟ್ಟು, ಚಿಕ್ಕಬಾಣಾವರ, ಯಶವಂತಪುರ ಬೈಪಾಸ್, ಲೊಟ್ಟೆಗೊಲ್ಲಹಳ್ಳಿ ಬಂಗಾರಪೇಟೆ ಮೂಲಕ ಸಂಚರಿಸಲು ಕ್ರಮ ಕೈಗೊಳ್ಳಲಾಗಿದೆ. ಚಿಕ್ಕಬಾಣಾವರ ಮತ್ತು ಬೈಯಪ್ಪನಹಳ್ಳಿ ಎಸ್ಎಂವಿಟಿಯಲ್ಲಿ ನಿಲುಗಡೆ ಹೊಂದಿವೆ.</p>.<p>ಎಸ್ಎಸ್ಎಸ್ ಹುಬ್ಬಳ್ಳಿ– ಎಂಜಿಆರ್ ಚೆನ್ನೈ ಸೆಂಟ್ರಲ್ ಹಾಗೂ ಎಂಜಿಆರ್ ಚೆನ್ನೈ ಸೆಂಟ್ರಲ್–ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ಪ್ರೆಸ್ ರೈಲು ಯಶವಂತಪುರ, ಬಾಣಸವಾಡಿ, ಕೃಷ್ಣರಾಜಪುರ, ಬಂಗಾರಪೇಟೆ, ಜೋಲಾರಪೇಟೆ ಬದಲು ಚಿಕ್ಕಬಾಣಾವರ, ಯಶವಂತಪುರ, ಲೊಟ್ಟೆಗೊಲ್ಲಹಳ್ಳಿ ಬೈಪಾಸ್, ಬಂಗಾರಪೇಟೆ ಮೂಲಕ ಸಂಚರಿಸಲಿದೆ. ಈ ರೈಲುಗಳು ಎಸ್ಎಂವಿಟಿ ಮತ್ತು ವೈಟ್ಫೀಲ್ಡ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿವೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಯಶವಂತಪುರ ರೈಲು ನಿಲ್ದಾಣದಲ್ಲಿ ರೈಲುಗಳ ದಟ್ಟಣೆ ಕಡಿಮೆ ಮಾಡಲು ಮೂರು ಜೋಡಿ ರೈಲುಗಳ ನಿಲುಗಡೆಯನ್ನು ಬೇರೆ ನಿಲ್ದಾಣಗಳಿಗೆ ಸ್ಥಳಾಂತರಿಸಲು ರೈಲ್ವೆ ಮಂಡಳಿ ಅನುಮತಿ ನೀಡಿದೆ.</p>.<p>ಯಶವಂತಪುರ ರೈಲು ನಿಲ್ದಾಣಕ್ಕೆ ಬರುತ್ತಿದ್ದ ಈ ರೈಲುಗಳು ಜೂನ್ 24ರಿಂದ ಬದಲಿ ಮಾರ್ಗದಲ್ಲಿ ಸಂಚರಿಸಲಿವೆ.</p>.<p>ದಾದರ್ – ತಿರುನೆಲ್ವೇಲಿ ಮತ್ತು ತಿರುನೆಲ್ವೇಲಿ–ದಾದರ್ ಎಕ್ಸ್ಪ್ರೆಸ್ ರೈಲು ಯಶವಂತಪುರ, ಬಾಣಸವಾಡಿ, ಹೊಸೂರು, ಧರ್ಮಪುರಿ– ಓಮಲೂರು ಮೂಲಕ ಸಂಚರಿಸುವ ಬದಲು ಚಿಕ್ಕಬಾಣಾವರ, ಯಶವಂತಪುರ ಬೈಪಾಸ್, ಲೊಟ್ಟೆಗೊಲ್ಲಹಳ್ಳಿ, ಬೈಯ್ಯಪ್ಪನಹಳ್ಳಿ ಮೂಲಕ ಚಲಿಸಲಿವೆ. ಚಿಕ್ಕಬಾಣಾವರ ಮತ್ತು ಬೈಯಪ್ಪನಹಳ್ಳಿ ಎಸ್ಎಂವಿಟಿಯಲ್ಲಿ ನಿಲುಗಡೆಯನ್ನು ಹೊಂದಿದೆ.</p>.<p>ದಾದರ್-ಪುದುಚೇರಿ ಮತ್ತು ಪುದುಚೇರಿ-ದಾದರ್ ಎಕ್ಸ್ಪ್ರೆಸ್ ರೈಲು ಯಶವಂತಪುರ, ಬಾಣಸವಾಡಿ, ಕೃಷ್ಣರಾಜಪುರ, ಬಂಗಾರಪೇಟೆ, ಜೋಲಾರಪೇಟೆ ಮೂಲಕ ಸಂಚರಿಸುತ್ತಿರುವುದನ್ನು ಕೈಬಿಟ್ಟು, ಚಿಕ್ಕಬಾಣಾವರ, ಯಶವಂತಪುರ ಬೈಪಾಸ್, ಲೊಟ್ಟೆಗೊಲ್ಲಹಳ್ಳಿ ಬಂಗಾರಪೇಟೆ ಮೂಲಕ ಸಂಚರಿಸಲು ಕ್ರಮ ಕೈಗೊಳ್ಳಲಾಗಿದೆ. ಚಿಕ್ಕಬಾಣಾವರ ಮತ್ತು ಬೈಯಪ್ಪನಹಳ್ಳಿ ಎಸ್ಎಂವಿಟಿಯಲ್ಲಿ ನಿಲುಗಡೆ ಹೊಂದಿವೆ.</p>.<p>ಎಸ್ಎಸ್ಎಸ್ ಹುಬ್ಬಳ್ಳಿ– ಎಂಜಿಆರ್ ಚೆನ್ನೈ ಸೆಂಟ್ರಲ್ ಹಾಗೂ ಎಂಜಿಆರ್ ಚೆನ್ನೈ ಸೆಂಟ್ರಲ್–ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ಪ್ರೆಸ್ ರೈಲು ಯಶವಂತಪುರ, ಬಾಣಸವಾಡಿ, ಕೃಷ್ಣರಾಜಪುರ, ಬಂಗಾರಪೇಟೆ, ಜೋಲಾರಪೇಟೆ ಬದಲು ಚಿಕ್ಕಬಾಣಾವರ, ಯಶವಂತಪುರ, ಲೊಟ್ಟೆಗೊಲ್ಲಹಳ್ಳಿ ಬೈಪಾಸ್, ಬಂಗಾರಪೇಟೆ ಮೂಲಕ ಸಂಚರಿಸಲಿದೆ. ಈ ರೈಲುಗಳು ಎಸ್ಎಂವಿಟಿ ಮತ್ತು ವೈಟ್ಫೀಲ್ಡ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿವೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>