<p><strong>ಬೆಂಗಳೂರು: </strong>ಚಾಮರಾಜಪೇಟೆ ಬಳಿಯ ಸರಕು ಸಂಗ್ರಹ ಗೋದಾಮಿನಲ್ಲಿ ನಡೆದಿರುವ ಸ್ಫೋಟಕ್ಕೆ ಪಟಾಕಿ ಕಾರಣ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.<br /><br />‘ಗೋದಾಮಿನಲ್ಲಿ 80 ಬಾಕ್ಸ್ ಪಟಾಕಿ ಸಂಗ್ರಹಿಸಲಾಗಿತ್ತು. ಪ್ರತಿಯೊಂದು ಬಾಕ್ಸ್ ತಲಾ ಸುಮಾರು 20 ಕೆ.ಜಿ ಇದ್ದವು.ಅಂಥ ಬಾಕ್ಸ್ಗಳ ಪೈಕಿ 2 ಬಾಕ್ಸ್ಗಳು ಸ್ಫೋಟಗೊಂಡಿದ್ದು, ಅದರ ಅವಶೇಷಗಳು ಪತ್ತೆಯಾಗಿವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.<br /><br />‘ಪಟಾಕಿಗಳು ಬಾಕ್ಸ್ನಲ್ಲಿ ಇದ್ದಿದ್ದರಿಂದ ತೀವ್ರ ಒತ್ತಡದಿಂದ ಸ್ಫೋಟ ಸಂಭವಿಸಿದೆ. ಬಾಂಬ್ ಸ್ಫೋಟಗೊಂಡ ರೀತಿಯಲ್ಲಿ ಸದ್ದು ಬಂದಿದೆ. ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಅವಶೇಷಗಳ ಮಾದರಿ ಸಂಗ್ರಹಿಸುತ್ತಿದ್ದಾರೆ’ ಎಂದೂ ತಿಳಿಸಿದರು.<br /><br />‘ಪಟಾಕಿ ಸಂಗ್ರಹಕ್ಕೆ ಅನುಮತಿ ಇರಲಿಲ್ಲ. ಬಿಬಿಎಂಪಿಯಿಂದಲೂ ಪರವಾನಗಿ ಪಡೆದಿರಲಿಲ್ಲ. ಇದೊಂದು ಅಕ್ರಮವಾಗಿ ಪಟಾಕಿ ಸಂಗ್ರಹಿಸಿದ್ದ ಗೋದಾಮು. ಇದರ ಮಾಲೀಕರನ್ನು ಪತ್ತೆ ಮಾಡಲಾಗುತ್ತಿದೆ’ ಎಂದೂ ಹೇಳಿದರು.<br /><br /><strong>ಇಬ್ಬರ ಸಾವು ಖಚಿತ; </strong>ಅವಘಢದಲ್ಲಿ ಇಬ್ಬರು ಮೃತಪಟ್ಟಿರುವ ಮಾಹಿತಿ ಖಚಿತವಾಗಿದೆ. ಇನ್ನೊಬ್ಬರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಅವಘಡದಲ್ಲಿ ಇಬ್ಬರಷ್ಟೇ ಮೃತಪಟ್ಟಿರಬಹುದು. ಉಳಿದಂತೆ, ಮೂವರು ಗಾಯಗೊಂಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಚಾಮರಾಜಪೇಟೆ ಬಳಿಯ ಸರಕು ಸಂಗ್ರಹ ಗೋದಾಮಿನಲ್ಲಿ ನಡೆದಿರುವ ಸ್ಫೋಟಕ್ಕೆ ಪಟಾಕಿ ಕಾರಣ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.<br /><br />‘ಗೋದಾಮಿನಲ್ಲಿ 80 ಬಾಕ್ಸ್ ಪಟಾಕಿ ಸಂಗ್ರಹಿಸಲಾಗಿತ್ತು. ಪ್ರತಿಯೊಂದು ಬಾಕ್ಸ್ ತಲಾ ಸುಮಾರು 20 ಕೆ.ಜಿ ಇದ್ದವು.ಅಂಥ ಬಾಕ್ಸ್ಗಳ ಪೈಕಿ 2 ಬಾಕ್ಸ್ಗಳು ಸ್ಫೋಟಗೊಂಡಿದ್ದು, ಅದರ ಅವಶೇಷಗಳು ಪತ್ತೆಯಾಗಿವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.<br /><br />‘ಪಟಾಕಿಗಳು ಬಾಕ್ಸ್ನಲ್ಲಿ ಇದ್ದಿದ್ದರಿಂದ ತೀವ್ರ ಒತ್ತಡದಿಂದ ಸ್ಫೋಟ ಸಂಭವಿಸಿದೆ. ಬಾಂಬ್ ಸ್ಫೋಟಗೊಂಡ ರೀತಿಯಲ್ಲಿ ಸದ್ದು ಬಂದಿದೆ. ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಅವಶೇಷಗಳ ಮಾದರಿ ಸಂಗ್ರಹಿಸುತ್ತಿದ್ದಾರೆ’ ಎಂದೂ ತಿಳಿಸಿದರು.<br /><br />‘ಪಟಾಕಿ ಸಂಗ್ರಹಕ್ಕೆ ಅನುಮತಿ ಇರಲಿಲ್ಲ. ಬಿಬಿಎಂಪಿಯಿಂದಲೂ ಪರವಾನಗಿ ಪಡೆದಿರಲಿಲ್ಲ. ಇದೊಂದು ಅಕ್ರಮವಾಗಿ ಪಟಾಕಿ ಸಂಗ್ರಹಿಸಿದ್ದ ಗೋದಾಮು. ಇದರ ಮಾಲೀಕರನ್ನು ಪತ್ತೆ ಮಾಡಲಾಗುತ್ತಿದೆ’ ಎಂದೂ ಹೇಳಿದರು.<br /><br /><strong>ಇಬ್ಬರ ಸಾವು ಖಚಿತ; </strong>ಅವಘಢದಲ್ಲಿ ಇಬ್ಬರು ಮೃತಪಟ್ಟಿರುವ ಮಾಹಿತಿ ಖಚಿತವಾಗಿದೆ. ಇನ್ನೊಬ್ಬರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಅವಘಡದಲ್ಲಿ ಇಬ್ಬರಷ್ಟೇ ಮೃತಪಟ್ಟಿರಬಹುದು. ಉಳಿದಂತೆ, ಮೂವರು ಗಾಯಗೊಂಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>