ಈ ಸುಗ್ರೀವಾಜ್ಞೆಯಲ್ಲಿ, ಆಶಾ ಕಾರ್ಯಕರ್ತರು, ವೈದ್ಯರು, ಅಧಿಕಾರಿಗಳ ಮೇಲೆ ಹಲ್ಲೆ, ಉದ್ದೇಶ ಪೂರ್ವಕವಾಗಿ ಸೋಂಕು ಹಬ್ಬಿಸುವುದು ಸೇರಿದಂತೆ ನಿಯಮ ಉಲ್ಲಂಘಿಸುವ ಎಲ್ಲ ಪ್ರಕರಣಗಳನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಲಾಗಿದ್ದು, ಅಂಥವರಿಗೆ 3 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.