‘ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ ಕೃಷ್ಣಪ್ಪ ಎಂಬುವರು 2020ರ ಡಿಸೆಂಬರ್ 2ರಂದು ಕುಟುಂಬ ಸಮೇತ ಊರಿಗೆ ಹೋಗಿದ್ದರು. ಡಿ. 12ರಂದು ಅವರಿಗೆ ಕರೆ ಮಾಡಿದ್ದ ಪಕ್ಕದ ಮನೆಯವರು, ‘ಯಾರೋ ನಿಮ್ಮ ಮನೆಯ ಬಾಗಿಲು ಮೀಟಿದ್ದು, ಕಳ್ಳತನ ನಡೆದಿರಬಹುದು’ ಎಂದು ಮಾಹಿತಿ ನೀಡಿದ್ದರು. ಮನೆಗೆ ಬಂದಿದ್ದ ಕೃಷ್ಣಪ್ಪ, ಪರಿಶೀಲನೆ ನಡೆಸಿದಾಗ ಕಳ್ಳತನವಾಗಿದ್ದು ಗೊತ್ತಾಗಿತ್ತು. ಬಳಿಕ ಠಾಣೆಗೆ ದೂರು ನೀಡಿದ್ದರು’ ಎಂದೂ ತಿಳಿಸಿದರು.