‘ಮುಖ್ಯರಸ್ತೆಯ ಸ್ಥಿತಿ ಇದಾದರೆ, ಅಡ್ಡರಸ್ತೆಗಳಲ್ಲಿ 110 ಹಳ್ಳಿ ಯೋಜನೆಯಡಿ ಒಳಚರಂಡಿ ಮತ್ತು ಕಾವೇರಿ ಪೈಪ್ಲೈನ್ ಅಳವಡಿಸಲಾಗಿದೆ. ಆದರೆ, ರಸ್ತೆಗಳ ದುರಸ್ತಿ ಕಾಮಗಾರಿ ಮಾತ್ರ ನಡೆದಿಲ್ಲ. ತುಂಗಾನಗರದ ಯಾವ ರಸ್ತೆಗೆ ಹೋದರೂ ವಾಹನ ಸಂಚರಿಸಲು ಸಾಧ್ಯವಿಲ್ಲದಷ್ಟು ದುಸ್ತರವಾಗಿದೆ. ಸಮಸ್ಯೆಗೆ ಮುಕ್ತಿ ದೊರಕಲು ಇನ್ನೆಷ್ಟು ದಿನ ಕಾಯಬೇಕೋ ಗೊತ್ತಿಲ್ಲ’ ಎಂದು ತುಂಗಾನಗರದಲ್ಲಿ ಬೇಕರಿ ನಡೆಸುವ ನವೀನ್ಗೌಡ ಬೇಸರ ವ್ಯಕ್ತಪಡಿಸಿದರು.