ಕ್ಷೇತ್ರದ ಇತರೆ ಟಿಕೆಟ್ ಆಕಾಂಕ್ಷಿಗಳಾದ ಕೆ.ಸಿ. ಅಶೋಕ್, ಕೆ. ನಾಗಭೂಷಣ್ ಹಾಗೂ ಗೀತಾ ಶಿವರಾಮ್ ಅವರು ತಮ್ಮ ಬೆಂಬಲಿಗರೊಂದಿಗೆ ಬಂದು, ಹೈಕಮಾಂಡ್ ಅಧಿಕೃತ ಅಭ್ಯರ್ಥಿ ಹೆಸರು ಪ್ರಕಟಿಸಿಲ್ಲ. ಆದ್ದರಿಂದ ಚುನಾವಣಾ ಪ್ರಚಾರ ಕೈಗೊಳ್ಳಬಾರದು ಎಂದು ಗೋ ಬ್ಯಾಕ್ ಧನಂಜಯ್ ಎಂದು ಕೂಗುತ್ತಾ ಪ್ರಚಾರ ಕಾರ್ಯಕ್ಕೆ ಅಡ್ಡಿಪಡಿಸಿದರು. ಗಂಗಮ್ಮನ ಗುಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರ್ಯಕರ್ತರನ್ನು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದರು.